ಓದುಗರ ಪತ್ರ

ಓದುಗರ ಪತ್ರ | ಕಮಲ್ ಹಾಸನ್ ಹೇಳಿಕೆ ಖಂಡನೀಯ

ಚೆನ್ನೈನಲ್ಲಿ ನಡೆದ ಥಗ್‌ಲೈಫ್‌- ಸಿನಿಮಾ ಈವೆಂಟ್‌ನಲ್ಲಿ ತಮಿಳು ನಟ ಕಮಲ್ ಹಾಸನ್ ಅವರು ಕನ್ನಡ ಭಾಷೆ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿರುವುದು ಖಂಡನೀಯ. ಇದೇ ಸಮಾರಂಭದಲ್ಲಿ ಕನ್ನಡ ನಟ ಶಿವರಾಜ್ ಕುಮಾರ್ ಉಪಸ್ಥಿತರಿದ್ದರೂ ಅವರು ಆ ಸಂದರ್ಭದಲ್ಲಿ ಯಾವುದೇ ಪ್ರತಿಕ್ರಿಯೆ ನೀಡದದ್ದು ಬೇಸರ ತಂದಿದೆ. ಕನ್ನಡಪರ ಸಂಘಟನೆಗಳು ಕಮಲ್ ಹಾಸನ್ ಅವರು ತಮ್ಮ ಹೇಳಿಕೆ ಕುರಿತು ಕ್ಷಮೆ ಯಾಚಿಸಬೇಕೆಂದು ಪ್ರತಿಭಟಿಸಿ ಒತ್ತಾಯಿಸಿವೆ. ಇದಕ್ಕೆ ಸ್ಪಷ್ಟೀಕರಣ ನೀಡಿರುವ ಕಮಲ್ ಹಾಸನ್, ನಾನು ಪ್ರೀತಿಯಿಂದ ಹೇಳಿದ್ದೇನೆ. ಪ್ರೀತಿಯಿಂದ ಆಡಿದ ಮಾತಿಗೆ ಕ್ಷಮೆ ಕೇಳುವುದಿಲ್ಲ ಎಂದು ಉದ್ಧಟತನ ತೋರಿದ್ದಾರೆ. ಇಂತಹ ಹೇಳಿಕೆಗಳಿಂದ ರಾಜ್ಯ-ರಾಜ್ಯಗಳ ನಡುವೆ ಇರುವ ಸಾಮರಸ್ಯ ಹಾಳಾಗುತ್ತದೆ.

ನಟ ಕಮಲ್ ಹಾಸನ್ ಅವರು ಕೂಡಲೇ ತಮ್ಮ ಹೇಳಿಕೆ ಕುರಿತು ಕ್ಷಮೆ ಯಾಚಿಸುವ ಮೂಲಕ ವಿವಾದವನ್ನು ಅಂತ್ಯಗೊಳಿಸುವುದು ಅಗತ್ಯ.

-ಎ. ಎಸ್. ಗೋಪಾಲ ಕೃಷ್ಣ, ರಾಮಕೃಷ್ಣನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

56 mins ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

1 hour ago

ರಾಜ್ಯದಲ್ಲಿ ಪೂರ್ವ ಮುಂಗಾರು ಆರ್ಭಟ: ಮುಂದಿನ 7 ದಿನ ಮುಂದುವರಿಯಲಿದೆ ಮಳೆ

ಬೆಂಗಳೂರು: ಸಮುದ್ರ ಭಾಗದಲ್ಲಿ ವೈಪರೀತ್ಯಗಳು ಮುಂದುವರಿದಿದ್ದು, ಮುಂಗಾರು ಮಳೆ ಆಗಮನಕ್ಕೆ ದಿನಗಣನೇ ಶುರುವಾಗಿದೆ. ಮತ್ತೊಂದೆಡೆ ರಾಜ್ಯದ ವಿವಿಧ ಕಡೆಗಳಲ್ಲಿ ಪೂರ್ವ…

1 hour ago

ಬೆಂಗಳೂರಿಗಿಂತ ಮಡಿಕೇರಿಯ ವಾಯುಗುಣಮಟ್ಟವೇ ಉತ್ತಮ!

ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ…

2 hours ago

ತಮಿಳುನಾಡು ಸಿಎಂ ವಿಜಯ್‌ ಸಾಧನೆ ಹೊಗಳಿದ ರಜಿನಿಕಾಂತ್‌

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ‌ ಚನ್ನೈನ ತಮ್ಮ ನಿವಾಸದಲ್ಲಿ…

2 hours ago

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ ; 68 ಪ್ರಯಾಣಿಕರ ಸ್ಥಳಾಂತರ

ಇಂದೋರ್‌ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…

5 hours ago