ಓದುಗರ ಪತ್ರ
ಎಲ್ಲೆಡೆ ಧಾರಾಕಾರ ಮಳೆ ಆಗುತ್ತಿದೆ. ಪರಿಣಾಮವಾಗಿ ಸಾರ್ವಜನಿಕರು ಅನೇಕ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಸಾವು-ನೋವು-ನಷ್ಟ ಎಲ್ಲೆಡೆ ಉಂಟಾಗಿದೆ. ಇದರ ಜೊತೆಗೆ ಮಳೆ ಬಂದಾಗ ವಿದ್ಯುತ್ ಅನಾಹುತಗಳೂ ಸಂಭವಿಸುವುದು ಸಹಜ. ಈ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸ ಬೇಕಿದೆ.
ವಿದ್ಯುತ್ ಕಂಬಗಳಿಗೆ ವೈಯರ್ ಕಟ್ಟಿ ಬಟ್ಟೆ ಒಣಗಿಸುವುದು ಅಪಾಯಕಾರಿ. ಮಳೆ-ಗಾಳಿ ಪರಿಣಾಮವಾಗಿ ವಿದ್ಯುತ್ ತಂತಿಗಳು ಮರದ ಮೇಲೆ, ರಸ್ತೆಗಳಲ್ಲಿ, ಮನೆಯ ಮೇಲೆ ಬೀಳಬಹುದು.
ಅದರಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದು, ಆಕಸ್ಮಿಕವಾಗಿ ಯಾರಾದರೂ ಅದನ್ನು ತುಳಿದರೆ ಅಥವಾ ಹಿಡಿದರೆ ಪ್ರಾಣಾಪಾಯವೇ ಉಂಟಾಗಬಹುದು.
ಜಮೀನು – ತೋಟಗಳಲ್ಲಿ ಪಂಪ್ಸೆಟ್ ಬಳಸುವಾಗ ಮಳೆ ಬಂದರೆ ರೈತರು ಎಚ್ಚರಿಕೆ ವಹಿಸುವುದು ಅಗತ್ಯ. ಆದ್ದರಿಂದ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗೆ ಇದರ ಬಗ್ಗೆ ತಿಳಿವಳಿಕೆ ನೀಡಬೇಕು. ಮಳೆ ಬಂದಾಗ ಮನೆಯ ವಿದ್ಯುತ್ ಉಪಕರಣಗಳನ್ನು ಜಾಗ್ರತೆಯಿಂದ ಉಪಯೋಗಿಸಬೇಕು.
ಮುಖ್ಯವಾಗಿ ಸೆಸ್ಕ್ ಸಿಬ್ಬಂದಿ, ಅಧಿಕಾರಿಗಳು ಮಳೆ ಗಾಳಿ ಇದ್ದಾಗ ವಿದ್ಯುತ್ ಕಂಬಗಳನ್ನು ಸರಿಯಾಗಿ ಪರಿಶೀಲಿಸಬೇಕು. ಅದರಿಂದ ವಿದ್ಯುತ್ ಅವಘಡಗಳನ್ನು ನಿಯಂತ್ರಿಸಬಹುದು.
-ಎಂ. ಎಸ್. ಉಷಾ ಪ್ರಕಾಶ್, ಎಸ್ಬಿಎಂ ಕಾಲೋನಿ, ಮೈಸೂರು
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…
ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…