ಓದುಗರ ಪತ್ರ

ಓದುಗರ ಪತ್ರ | ವಿದ್ಯುತ್ ಅವಘಡದ ಬಗ್ಗೆ ಇರಲಿ ಎಚ್ಚರ

ಎಲ್ಲೆಡೆ ಧಾರಾಕಾರ ಮಳೆ ಆಗುತ್ತಿದೆ. ಪರಿಣಾಮವಾಗಿ ಸಾರ್ವಜನಿಕರು ಅನೇಕ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಸಾವು-ನೋವು-ನಷ್ಟ ಎಲ್ಲೆಡೆ ಉಂಟಾಗಿದೆ. ಇದರ ಜೊತೆಗೆ ಮಳೆ ಬಂದಾಗ ವಿದ್ಯುತ್ ಅನಾಹುತಗಳೂ ಸಂಭವಿಸುವುದು ಸಹಜ. ಈ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸ ಬೇಕಿದೆ.

ವಿದ್ಯುತ್ ಕಂಬಗಳಿಗೆ ವೈಯರ್ ಕಟ್ಟಿ ಬಟ್ಟೆ ಒಣಗಿಸುವುದು ಅಪಾಯಕಾರಿ. ಮಳೆ-ಗಾಳಿ ಪರಿಣಾಮವಾಗಿ ವಿದ್ಯುತ್ ತಂತಿಗಳು ಮರದ ಮೇಲೆ, ರಸ್ತೆಗಳಲ್ಲಿ, ಮನೆಯ ಮೇಲೆ ಬೀಳಬಹುದು.

ಅದರಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದು, ಆಕಸ್ಮಿಕವಾಗಿ ಯಾರಾದರೂ ಅದನ್ನು ತುಳಿದರೆ ಅಥವಾ ಹಿಡಿದರೆ ಪ್ರಾಣಾಪಾಯವೇ ಉಂಟಾಗಬಹುದು.

ಜಮೀನು – ತೋಟಗಳಲ್ಲಿ ಪಂಪ್‌ಸೆಟ್ ಬಳಸುವಾಗ ಮಳೆ ಬಂದರೆ ರೈತರು ಎಚ್ಚರಿಕೆ ವಹಿಸುವುದು ಅಗತ್ಯ. ಆದ್ದರಿಂದ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗೆ ಇದರ ಬಗ್ಗೆ ತಿಳಿವಳಿಕೆ ನೀಡಬೇಕು. ಮಳೆ ಬಂದಾಗ ಮನೆಯ ವಿದ್ಯುತ್ ಉಪಕರಣಗಳನ್ನು ಜಾಗ್ರತೆಯಿಂದ ಉಪಯೋಗಿಸಬೇಕು.

ಮುಖ್ಯವಾಗಿ ಸೆಸ್ಕ್ ಸಿಬ್ಬಂದಿ, ಅಧಿಕಾರಿಗಳು ಮಳೆ ಗಾಳಿ ಇದ್ದಾಗ ವಿದ್ಯುತ್ ಕಂಬಗಳನ್ನು ಸರಿಯಾಗಿ ಪರಿಶೀಲಿಸಬೇಕು. ಅದರಿಂದ ವಿದ್ಯುತ್ ಅವಘಡಗಳನ್ನು ನಿಯಂತ್ರಿಸಬಹುದು.

-ಎಂ. ಎಸ್. ಉಷಾ ಪ್ರಕಾಶ್, ಎಸ್‌ಬಿಎಂ ಕಾಲೋನಿ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

11 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

11 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago