ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ವಿದ್ಯಾರ್ಥಿ ಗಳ ಬದುಕಿನ ಪ್ರಮುಖ ಘಟ್ಟಗಳಾಗಿವೆ. ಈ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿ ಗಳನ್ನು ಶಾಲೆಯವರು ಹಾಗೂ ಪೋಷಕರು ಕೊಂಡಾಡುತ್ತಾರೆ. ಉತ್ತೀರ್ಣರಾದವರು ತಮ್ಮ ಮುಂದಿನ ಗುರಿಯ ಬಗ್ಗೆ ಚಿಂತಿಸುತ್ತಾರೆ. ಆದರೆ ಅನುತ್ತೀರ್ಣ ಗೊಂಡ ಕೆಲ ವಿದ್ಯಾರ್ಥಿಗಳು ಪೋಷಕ ರಿಗೆ ಹೆದರಿ ಜೀವಕ್ಕೆ ಅಪಾಯ ತಂದುಕೊಳ್ಳುವ ಸಾಧ್ಯತೆಗಳಿರುತ್ತವೆ. ಉತ್ತೀರ್ಣರಾಗಲಿ, ಅನುತ್ತೀರ್ಣರಾಗಲಿ ಮಕ್ಕಳನ್ನು ಪ್ರೋತ್ಸಾಹಿಸಿ ಮುಂದಿನ ದಾರಿ ತೋರಿಸಬೇಕಾದ ಜವಾಬ್ದಾರಿ ಪೋಷಕರು ಹಾಗೂ ಶಿಕ್ಷಕರ ಮೇಲಿರುತ್ತದೆ. ಮಕ್ಕಳು ಗೆದ್ದಾಗ ಹಿಗ್ಗದಂತೆ, ಸೋತಾಗ ಕುಗ್ಗದಂತೆ ಅವರನ್ನು ಪ್ರೋತ್ಸಾಹಿಸಿ ಮೇಲೆತ್ತಬೇಕು. ಪರೀಕ್ಷಾ ಸಮಯದಲ್ಲಿ ಮಕ್ಕಳು ಸಮಯ ವ್ಯರ್ಥ ಮಾಡದಂತೆ, ಓದುವತ್ತ ಅವರ ಗಮನ ಕೇಂದ್ರೀಕೃತವಾಗುವಂತೆ ನೋಡಿಕೊಳ್ಳಬೇಕು. ಒಂದು ವೇಳೆ ಅವರು ಅನುತ್ತೀರ್ಣರಾದರೂ ಅವರ ಮನಸ್ಸಿಗೆ ಘಾಸಿಯಾಗದಂತೆ ಭರವಸೆಯ ಮಾತುಗಳನ್ನಾಡಿ, ಹುರಿದುಂಬಿಸಬೇಕು. ಮಕ್ಕಳು ಕೂಡ ಎದೆಗುಂದದೆ, ಪರೀಕ್ಷೆಯನ್ನು ಸವಾಲಾಗಿ ಸ್ವೀಕರಿಸ ಬೇಕು. -ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…