‘ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಆದ್ಯತೆಯ ಮೇರೆಗೆ ಚರ್ಚೆ’ ಎಂಬ ಮಾತನ್ನು ಉತ್ತರ ಕರ್ನಾಟಕದ ಮಂದಿ ದಶಕಗಳಿಂದಲೂ ಕೇಳುತ್ತಿದ್ದಾರೆಯೇ ವಿನಾ ಅವರ ಸಮಸ್ಯೆಗಳಿಗೆ ಪರಿಹಾರ ದೊರಕಿಲ್ಲ.
ಇಲ್ಲಿಯವರೆಗೂ ನಡೆದ ಎಲ್ಲ ಅಧಿವೇಶನಗಳಲ್ಲಿಯೂ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆಗಳಾಗಿದೆ. ಆದರೆ ಅವುಗಳನ್ನು ಪರಿಹಾರಿಸುವ ನಿಟ್ಟಿನಲ್ಲಿ ಸರ್ಕಾರ ಶ್ರಮಿಸಿಲ್ಲ. ಪರಿಣಾಮ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು ಕೇವಲ ಚರ್ಚೆಗಳಲ್ಲಿಯೇ ಉಳಿದಿವೆ.
ಇನ್ನು ಅಧಿವೇಶನಗಳು ನಡೆಯುವಾಗ ಉತ್ತರ ಕರ್ನಾಟಕ ಭಾಗದ ಎಷ್ಟು ಮಂದಿ ಶಾಸಕರು ಅಽವೇಶನದಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ಗಮನಿಸಿದಾಗ ಬೇಸರವಾಗುತ್ತದೆ. ಮೊದಲು ಉತ್ತರ ಕರ್ನಾಟಕದ ಶಾಸಕ ರೆಲ್ಲರೂ ಅಽವೇಶನದಲ್ಲಿ ಭಾಗಿಯಾಗಬೇಕು. ಸಮಸ್ಯೆಗಳನ್ನು ಸರ್ಕಾರದ ಮುಂದಿಟ್ಟು ಪರಿಹಾರಕ್ಕಾಗಿ ಆಗ್ರಹಿಸಬೇಕು. ಆಗ ಮಾತ್ರ ಉತ್ತರ ಕರ್ನಾ ಟಕ ಭಾಗ ಅಭಿವೃದ್ಧಿಯಾಗಲು ಸಾಧ್ಯ. ಇನ್ನು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆ ಕೇವಲ ಬೆಳಗಾವಿ ಅಽವೇಶನಕ್ಕೆ ಸೀಮಿತವಾಗಿದ್ದು, ಈ ಚರ್ಚೆ ಬೆಂಗಳೂರಿನ ಅಧಿವೇಶನದಲ್ಲೂ ನಡೆಯಲಿ.
-ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು
ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ಆದ ದೌರ್ಜನ್ಯ ಎಲ್ಲರೂ ತಲೆತಗ್ಗಿಸುವ ಘಟನೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಮತ್ತೆ ಕುಸಿತವಾಗಿದ್ದು, ಚಳಿಯ…
ನವದೆಹಲಿ: 2027ರ ಜನಗಣತಿಯ ಮೊದಲ ಹಂತದ ಮನೆ ಪಟ್ಟಿ ಕಾರ್ಯ ಈ ವರ್ಷದ ಏಪ್ರಿಲ್ 1 ರಿಂದ ಸೆಪ್ಟೆಂಬರ್.30ರವರೆಗೆ ಎಲ್ಲಾ…
ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಫೈರಿಂಗ್ ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ…
ಬೆಂಗಳೂರು: ಆದಷ್ಟು ಬೇಗ ಬಿಜೆಪಿ ಜೊತೆ ಜೆಡಿಎಸ್ ವಿಲೀನ ಆಗಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ…
ಮದ್ದೂರು: ಮದ್ದೂರು ಪಟ್ಟಣದ ಪೊಲೀಸ್ ಠಾಣೆಯ ವಿಶ್ರಾಂತಿ ಗೃಹದಲ್ಲಿ ಕಾನ್ಸ್ಟೇಬಲ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ…