‘ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಆದ್ಯತೆಯ ಮೇರೆಗೆ ಚರ್ಚೆ’ ಎಂಬ ಮಾತನ್ನು ಉತ್ತರ ಕರ್ನಾಟಕದ ಮಂದಿ ದಶಕಗಳಿಂದಲೂ ಕೇಳುತ್ತಿದ್ದಾರೆಯೇ ವಿನಾ ಅವರ ಸಮಸ್ಯೆಗಳಿಗೆ ಪರಿಹಾರ ದೊರಕಿಲ್ಲ.
ಇಲ್ಲಿಯವರೆಗೂ ನಡೆದ ಎಲ್ಲ ಅಧಿವೇಶನಗಳಲ್ಲಿಯೂ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆಗಳಾಗಿದೆ. ಆದರೆ ಅವುಗಳನ್ನು ಪರಿಹಾರಿಸುವ ನಿಟ್ಟಿನಲ್ಲಿ ಸರ್ಕಾರ ಶ್ರಮಿಸಿಲ್ಲ. ಪರಿಣಾಮ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು ಕೇವಲ ಚರ್ಚೆಗಳಲ್ಲಿಯೇ ಉಳಿದಿವೆ.
ಇನ್ನು ಅಧಿವೇಶನಗಳು ನಡೆಯುವಾಗ ಉತ್ತರ ಕರ್ನಾಟಕ ಭಾಗದ ಎಷ್ಟು ಮಂದಿ ಶಾಸಕರು ಅಽವೇಶನದಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ಗಮನಿಸಿದಾಗ ಬೇಸರವಾಗುತ್ತದೆ. ಮೊದಲು ಉತ್ತರ ಕರ್ನಾಟಕದ ಶಾಸಕ ರೆಲ್ಲರೂ ಅಽವೇಶನದಲ್ಲಿ ಭಾಗಿಯಾಗಬೇಕು. ಸಮಸ್ಯೆಗಳನ್ನು ಸರ್ಕಾರದ ಮುಂದಿಟ್ಟು ಪರಿಹಾರಕ್ಕಾಗಿ ಆಗ್ರಹಿಸಬೇಕು. ಆಗ ಮಾತ್ರ ಉತ್ತರ ಕರ್ನಾ ಟಕ ಭಾಗ ಅಭಿವೃದ್ಧಿಯಾಗಲು ಸಾಧ್ಯ. ಇನ್ನು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆ ಕೇವಲ ಬೆಳಗಾವಿ ಅಽವೇಶನಕ್ಕೆ ಸೀಮಿತವಾಗಿದ್ದು, ಈ ಚರ್ಚೆ ಬೆಂಗಳೂರಿನ ಅಧಿವೇಶನದಲ್ಲೂ ನಡೆಯಲಿ.
-ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು
ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ…
ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು…
ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್ ತಿಳಿಸಿದರು. ಮಂಡ್ಯ ತಾಲ್ಲೂಕಿನ…
ಮೈಸೂರು: ದಲಿತರೇ ಸಿಎಂ ಆಗಿದ್ದರೂ ಸಿದ್ದರಾಮಯ್ಯ ಅವರಷ್ಟು ದಲಿತರಿಗೆ ಕಾರ್ಯಕ್ರಮ ಕೊಡುತ್ತಿರಲಿಲ್ಲ ಎಂದು ಪರಿಷತ್ ಸದಸ್ಯ ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯರನ್ನು…
ಮೈಸೂರು: ವೈಚಾರಿಕ, ವೈಜ್ಞಾನಿಕ ಶಿಕ್ಷಣ ಪಡೆಯದಿದ್ದರೆ ನಾವೆಲ್ಲಾ ಮೌಡ್ಯಕ್ಕೆ ದಾಸರಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾನಸ…
ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು…