ಓದುಗರ ಪತ್ರ

ಓದುಗರ ಪತ್ರ | ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು ಚರ್ಚೆಗಷ್ಟೆ ಸೀಮಿತವೇ?

‘ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಆದ್ಯತೆಯ ಮೇರೆಗೆ ಚರ್ಚೆ’ ಎಂಬ ಮಾತನ್ನು ಉತ್ತರ ಕರ್ನಾಟಕದ ಮಂದಿ ದಶಕಗಳಿಂದಲೂ ಕೇಳುತ್ತಿದ್ದಾರೆಯೇ ವಿನಾ ಅವರ ಸಮಸ್ಯೆಗಳಿಗೆ ಪರಿಹಾರ ದೊರಕಿಲ್ಲ.

ಇಲ್ಲಿಯವರೆಗೂ ನಡೆದ ಎಲ್ಲ ಅಧಿವೇಶನಗಳಲ್ಲಿಯೂ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆಗಳಾಗಿದೆ. ಆದರೆ ಅವುಗಳನ್ನು ಪರಿಹಾರಿಸುವ ನಿಟ್ಟಿನಲ್ಲಿ ಸರ್ಕಾರ ಶ್ರಮಿಸಿಲ್ಲ. ಪರಿಣಾಮ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು ಕೇವಲ ಚರ್ಚೆಗಳಲ್ಲಿಯೇ ಉಳಿದಿವೆ.

ಇನ್ನು ಅಧಿವೇಶನಗಳು ನಡೆಯುವಾಗ ಉತ್ತರ ಕರ್ನಾಟಕ ಭಾಗದ ಎಷ್ಟು ಮಂದಿ ಶಾಸಕರು ಅಽವೇಶನದಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ಗಮನಿಸಿದಾಗ ಬೇಸರವಾಗುತ್ತದೆ. ಮೊದಲು ಉತ್ತರ ಕರ್ನಾಟಕದ ಶಾಸಕ ರೆಲ್ಲರೂ ಅಽವೇಶನದಲ್ಲಿ ಭಾಗಿಯಾಗಬೇಕು. ಸಮಸ್ಯೆಗಳನ್ನು ಸರ್ಕಾರದ ಮುಂದಿಟ್ಟು ಪರಿಹಾರಕ್ಕಾಗಿ ಆಗ್ರಹಿಸಬೇಕು. ಆಗ ಮಾತ್ರ ಉತ್ತರ ಕರ್ನಾ ಟಕ ಭಾಗ ಅಭಿವೃದ್ಧಿಯಾಗಲು ಸಾಧ್ಯ. ಇನ್ನು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆ ಕೇವಲ ಬೆಳಗಾವಿ ಅಽವೇಶನಕ್ಕೆ ಸೀಮಿತವಾಗಿದ್ದು, ಈ ಚರ್ಚೆ ಬೆಂಗಳೂರಿನ ಅಧಿವೇಶನದಲ್ಲೂ ನಡೆಯಲಿ.
-ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago