ಕಾಂಗ್ರೆಸ್ ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷಿ ಯೋಜನೆಯಡಿ ಮನೆಯ ಯಜಮಾನಿಗೆ ನೀಡುತ್ತಿದ್ದ ೨,೦೦೦ ರೂ. ಹಣ ಸರಿಯಾಗಿ ಫಲಾನುಭವಿಗಳ ಖಾತೆ ಸೇರುತ್ತಿಲ್ಲ. ಗೃಹಲಕ್ಷಿ ಯೋಜನೆ ನಿಂತು ಈಗಾಗಲೇ ೩ ತಿಂಗಳುಗಳು ಕಳೆದಿವೆ. ಅಲ್ಲದೆ ಗೃಹಜ್ಯೋತಿ ಯೋಜನೆಯಡಿ ಉಚಿತವಾಗಿ ನೀಡುವ ೨೦೦ ಯೂನಿಟ್ಗಳಿಂತ ಕಡಿಮೆ ವಿದ್ಯುತ್ ಖರ್ಚಾಗಿದ್ದರೂ ವಿದ್ಯುತ್ ಶುಲ್ಕ ವಿಽಸಲಾಗುತ್ತಿದೆ. ಉಳಿದ ಗ್ಯಾರಂಟಿಗಳ ಕಥೆ ಏನಾಗಿದೆಯೋ ಯಾರಿಗೂ ತಿಳಿಯುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಅಽಕಾರಕ್ಕೆ ಬಂದಾಗ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಮುಂದಿನ ೫ ವರ್ಷಗಳ ಕಾಲ ನಿಲ್ಲಿಸುವ ಮಾತೇ ಇಲ್ಲ ಎಂದಿತ್ತು. ಆದರೆ ಕೇವಲ ಒಂದೇ ವರ್ಷಕ್ಕೆ ಗ್ಯಾರಂಟಿ ಯೋಜನೆಗಳಿಗೆ ಗರಬಡಿದಂತಾಗಿದೆ. ಆದ್ದರಿಂದ ಸರ್ಕಾರ ಕೊಟ್ಟ ಭರವಸೆಯಂತೆಯೇ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲಿ.
-ನಾಗೇಂದ್ರ ಮೂರ್ತಿ ಸೋಸಲೆ, ಹಳೇ ಸೋಸಲೆ, ತಿ. ನರಸೀಪುರ ತಾ.
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ…
ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…