ಓದುಗರ ಪತ್ರ

ಓದುಗರ ಪತ್ರ | ಅನಗತ್ಯ ದೂರವಾಣಿ ಕರೆ ಕಿರಿಕಿರಿ ತಪ್ಪಿಸಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಏ.೨೪ರಂದು ಪ್ರಕಟವಾಗಲಿದೆ. ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದರು ಎಂಬ ನಾಣ್ಣುಡಿಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಪೋಷಕರ ಮೊಬೈಲ್ ಸಂಖ್ಯೆಗೆ ಕೆಲವು ಖಾಸಗಿ ಪಿಯುಸಿ ಕಾಲೇಜಿನವರು ಕರೆ ಮಾಡಿ ನಮ್ಮ ಕಾಲೇಜಿಗೆ ನಿಮ್ಮ ಮಕ್ಕಳನ್ನು ಸೇರಿಸಿ ಎಂದು ಒತ್ತಾಯಿಸುತ್ತಿದ್ದಾರೆ. ನಿಮಗೆ ಫೋನ್ ನಂಬರ್ ಕೊಟ್ಟಿದ್ದು ಯಾರು ಎಂದು ಕೇಳಿದರೆ ಆಯಾ ಶಾಲೆಗಳಿಂದ ಪಡೆದಿದ್ದೇವೆ ಎನ್ನುತ್ತಾರೆ. ಈ ಬಗ್ಗೆ ಶಾಲೆಗಳಲ್ಲಿ ವಿಚಾರಿಸಿದರೆ ನಾವು ಯಾವ ಕಾಲೇಜಿಗೂ ಪೋಷಕರ ಫೋನ್ ನಂಬರ್ ಕೊಡುವುದಿಲ್ಲ ಎನ್ನುತ್ತಾರೆ. ಖಾಸಗಿ ಕಾಲೇಜುಗಳ ದೂರವಾಣಿ ಕರೆಯಿಂದ ಪೋಷಕರಿಗೆ ಕಿರಿಕಿರಿಯಾಗುತ್ತಿದೆ. ಈ ಬಗ್ಗೆ ಶಿಕ್ಷಣ ಇಲಾಖೆಯವರು ಕೂಡಲೇ ಕ್ರಮ ಕೈಗೊಂಡು ಖಾಸಗಿ ಕಾಲೇಜುಗಳಿಗೆ ಪೋಷಕರ ದೂರವಾಣಿ ಸಂಖ್ಯೆಗಳನ್ನು ಕೊಡುವವರ ವಿರುದ್ಧ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.
– ನಿಂಗರಾಜ್, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

27 mins ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

29 mins ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

31 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

33 mins ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

37 mins ago