ಓದುಗರ ಪತ್ರ
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಏ.೨೪ರಂದು ಪ್ರಕಟವಾಗಲಿದೆ. ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದರು ಎಂಬ ನಾಣ್ಣುಡಿಯಂತೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಪೋಷಕರ ಮೊಬೈಲ್ ಸಂಖ್ಯೆಗೆ ಕೆಲವು ಖಾಸಗಿ ಪಿಯುಸಿ ಕಾಲೇಜಿನವರು ಕರೆ ಮಾಡಿ ನಮ್ಮ ಕಾಲೇಜಿಗೆ ನಿಮ್ಮ ಮಕ್ಕಳನ್ನು ಸೇರಿಸಿ ಎಂದು ಒತ್ತಾಯಿಸುತ್ತಿದ್ದಾರೆ. ನಿಮಗೆ ಫೋನ್ ನಂಬರ್ ಕೊಟ್ಟಿದ್ದು ಯಾರು ಎಂದು ಕೇಳಿದರೆ ಆಯಾ ಶಾಲೆಗಳಿಂದ ಪಡೆದಿದ್ದೇವೆ ಎನ್ನುತ್ತಾರೆ. ಈ ಬಗ್ಗೆ ಶಾಲೆಗಳಲ್ಲಿ ವಿಚಾರಿಸಿದರೆ ನಾವು ಯಾವ ಕಾಲೇಜಿಗೂ ಪೋಷಕರ ಫೋನ್ ನಂಬರ್ ಕೊಡುವುದಿಲ್ಲ ಎನ್ನುತ್ತಾರೆ. ಖಾಸಗಿ ಕಾಲೇಜುಗಳ ದೂರವಾಣಿ ಕರೆಯಿಂದ ಪೋಷಕರಿಗೆ ಕಿರಿಕಿರಿಯಾಗುತ್ತಿದೆ. ಈ ಬಗ್ಗೆ ಶಿಕ್ಷಣ ಇಲಾಖೆಯವರು ಕೂಡಲೇ ಕ್ರಮ ಕೈಗೊಂಡು ಖಾಸಗಿ ಕಾಲೇಜುಗಳಿಗೆ ಪೋಷಕರ ದೂರವಾಣಿ ಸಂಖ್ಯೆಗಳನ್ನು ಕೊಡುವವರ ವಿರುದ್ಧ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.
– ನಿಂಗರಾಜ್, ಮೈಸೂರು
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…