ಓದುಗರ ಪತ್ರ

ಓದುಗರ ಪತ್ರ: ಕಾಡಾ ಕಚೇರಿಯಲ್ಲಿ ನಾಯಿಗಳ ಹಾವಳಿ ತಪ್ಪಿಸಿ

ಮೈಸೂರಿನ ಕಾಡಾ ಕಚೇರಿ ಕಟ್ಟಡದಲ್ಲಿ ಅನೇಕ ಸರ್ಕಾರಿ ಕಚೇರಿಗಳಿವೆ. ಜನ ಪ್ರತಿನಿಧಿಗಳ ಕಾರ್ಯಾಲಯಗಳಿವೆ. ಕೇಂದ್ರ ಸರ್ಕಾರದ ಅಂಚೆ ಕಚೇರಿಯೂ ಇಲ್ಲೇ ಇದೆ. ಈ ಕಚೇರಿ ಬೀದಿ ನಾಯಿಗಳ ಆವಾಸಸ್ಥಾನವೂ ಆಗಿರುವುದರಿಂದ ಸಾರ್ವಜನಿಕರು ಇಲ್ಲಿಗೆ ಭೇಟಿ ನೀಡಲು ಭಯಪಡುತ್ತಿದ್ದಾರೆ.

ಕಚೇರಿಯ ಆವರಣದಲ್ಲಿ ಸುಮಾರು ೨೫ ನಾಯಿಗಳಿವೆ, ಇಲ್ಲಿರುವ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಗೂ ಕಾಡಾ ಕಚೇರಿ ಆವರಣದಲ್ಲಿ ಹತ್ತು ಹಲವು ವರ್ಷಗಳಿಂದ ಅಕ್ರಮವಾಗಿ ಕಾಫಿ, ಟೀ ಉಪಾಹಾರ ಮಾರುವ ಪೆಟ್ಟಿಗೆ ಅಂಗಡಿಗಳ ಮಾಲೀಕರು ಈ ನಾಯಿಗಳಿಗೆ ಆಹಾರ ಪೂರೈಸುತ್ತಿದ್ದಾರೆ.

ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಕಾಡಾ ಕಚೇರಿಯಲ್ಲಿರುವ ಜನಪ್ರತಿನಿಧಿಗಳ ಕಚೇರಿಗೆ ಭೇಟಿ ನೀಡುವ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ನಾಯಿಗಳ ಗುಂಪು ಸಾಮೂಹಿಕವಾಗಿ ದಾಳಿ ಮಾಡುತ್ತದೆ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಕೂಡಲೇ ಇತ್ತ ಗಮನ ಹರಿಸಿ ಕಾಡಾ ಕಚೇರಿ ಆವರಣದಲ್ಲಿನ ನಾಯಿಗಳ ಹಾವಳಿ ನಿಯಂತ್ರಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

 -ಎಸ್.ರಾಘವೇಂದ್ರ, ಸಿದ್ದಾರ್ಥನಗರ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

39 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

4 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

5 hours ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

17 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

18 hours ago