ಓದುಗರ ಪತ್ರ

ಓದುಗರ ಪತ್ರ: ಕಾಡಾ ಕಚೇರಿಯಲ್ಲಿ ನಾಯಿಗಳ ಹಾವಳಿ ತಪ್ಪಿಸಿ

ಮೈಸೂರಿನ ಕಾಡಾ ಕಚೇರಿ ಕಟ್ಟಡದಲ್ಲಿ ಅನೇಕ ಸರ್ಕಾರಿ ಕಚೇರಿಗಳಿವೆ. ಜನ ಪ್ರತಿನಿಧಿಗಳ ಕಾರ್ಯಾಲಯಗಳಿವೆ. ಕೇಂದ್ರ ಸರ್ಕಾರದ ಅಂಚೆ ಕಚೇರಿಯೂ ಇಲ್ಲೇ ಇದೆ. ಈ ಕಚೇರಿ ಬೀದಿ ನಾಯಿಗಳ ಆವಾಸಸ್ಥಾನವೂ ಆಗಿರುವುದರಿಂದ ಸಾರ್ವಜನಿಕರು ಇಲ್ಲಿಗೆ ಭೇಟಿ ನೀಡಲು ಭಯಪಡುತ್ತಿದ್ದಾರೆ.

ಕಚೇರಿಯ ಆವರಣದಲ್ಲಿ ಸುಮಾರು ೨೫ ನಾಯಿಗಳಿವೆ, ಇಲ್ಲಿರುವ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಗೂ ಕಾಡಾ ಕಚೇರಿ ಆವರಣದಲ್ಲಿ ಹತ್ತು ಹಲವು ವರ್ಷಗಳಿಂದ ಅಕ್ರಮವಾಗಿ ಕಾಫಿ, ಟೀ ಉಪಾಹಾರ ಮಾರುವ ಪೆಟ್ಟಿಗೆ ಅಂಗಡಿಗಳ ಮಾಲೀಕರು ಈ ನಾಯಿಗಳಿಗೆ ಆಹಾರ ಪೂರೈಸುತ್ತಿದ್ದಾರೆ.

ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಕಾಡಾ ಕಚೇರಿಯಲ್ಲಿರುವ ಜನಪ್ರತಿನಿಧಿಗಳ ಕಚೇರಿಗೆ ಭೇಟಿ ನೀಡುವ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ನಾಯಿಗಳ ಗುಂಪು ಸಾಮೂಹಿಕವಾಗಿ ದಾಳಿ ಮಾಡುತ್ತದೆ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಕೂಡಲೇ ಇತ್ತ ಗಮನ ಹರಿಸಿ ಕಾಡಾ ಕಚೇರಿ ಆವರಣದಲ್ಲಿನ ನಾಯಿಗಳ ಹಾವಳಿ ನಿಯಂತ್ರಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

 -ಎಸ್.ರಾಘವೇಂದ್ರ, ಸಿದ್ದಾರ್ಥನಗರ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

4 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

12 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

12 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

12 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

15 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

15 hours ago