ಓದುಗರ ಪತ್ರ

ಓದುಗರ ಪತ್ರ | ಮೈಕ್ರೋ ಫೈನಾನ್ಸ್ ಕಂಪೆನಿಗಳ ಹಾವಳಿ ತಪ್ಪಿಸಿ

ವರುಣ ಮತ್ತು ನಂಜನಗೂಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ಹಲವು ಹಳ್ಳಿಗಳಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳ ಹಾವಳಿ ಹೆಚ್ಚಾಗಿದ್ದು, ಅವರ ಕಿರುಕುಳ ತಾಳಲಾರದೆ ಜನರು ಗ್ರಾಮಗಳನ್ನೇ ತೊರೆಯುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.

ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ, ರಾಂಪುರ, ಕುರಿಹುಂಡಿ, ಶಿರಮಳ್ಳಿ, ಕಗ್ಗಲೂರು, ಹೆಗ್ಗಡಹಳ್ಳಿ, ಮುದ್ದಹಳ್ಳಿ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳಿಗೆ ಹೆದರಿರುವ ಗ್ರಾಮಸ್ಥರು ಗ್ರಾಮಗಳನ್ನೇ ತೊರೆದಿದ್ದಾರೆ. ಹಬ್ಬದ ದಿನಗಳಲ್ಲಿಯೂ ಈ ಗ್ರಾಮಗಳ ಜನರು ಊರಿಗೆ ಬರಲಾಗದ ಸ್ಥಿತಿಯಲ್ಲಿದ್ದಾರೆ.

ಮೀಟರ್ ಬಡ್ಡಿಯ ದಂಧೆಗಿಂತಲೂ ಕಠೋರವಾಗಿ ಈ ಮೈಕ್ರೋ ಫೈನಾನ್ಸ್ ಕಂಪೆನಿಗಳು ವರ್ತಿಸುತ್ತಿದ್ದು, ಜೀವನಾಧಾರಕ್ಕೆಂದು ಸಾಲ ಮಾಡಿದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಸಾಲ ತೀರಿಸಲು ಪರದಾಡುವಂತಾಗಿದೆ. ಮೈಕ್ರೋ ಫೈನಾನ್ಸ್ ಕಂಪೆನಿಗಳು ನೀಡುವ ಸಾಲಕ್ಕೆ ಶೇ. ೪೦ರಷ್ಟು ಬಡ್ಡಿ ಹಾಕುತ್ತವೆ. ಇದರಿಂದ ಸಾಲ ಪಡೆದವರು ತೀರಿಸಲು ಪರದಾಡುವಂತಾಗಿದೆ. ಹಾಗಾಗಿ ಮೈಕ್ರೋ ಫೈನಾನ್ಸ್ ಕಂಪೆನಿಗಳನ್ನು ನಿಷೇಧಿಸಬೇಕು ಎಂದು ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಅಽವೇಶನದಲ್ಲಿ ಕೆಲವು ಶಾಸಕರು ಒತ್ತಾಯಿಸಿದ್ದಾರೆ. ಸಾಲದ ಆಮಿಷಗಳನ್ನು ಒಡ್ಡಿ ಬಲವಂತವಾಗಿ ಸಾಲ ಕೊಡುವ ಮೈಕ್ರೋ ಫೈನಾನ್ಸ್ ಕಂಪೆನಿಗಳಿಗೆ ಸರ್ಕಾರ ಆದಷ್ಟು ಬೇಗ ಕಡಿವಾಣ ಹಾಕಬೇಕು.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

2 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

3 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

4 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

4 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

9 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

9 hours ago