ಓದುಗರ ಪತ್ರ

ಓದುಗರ ಪತ್ರ | ಮೈಕ್ರೋ ಫೈನಾನ್ಸ್ ಕಂಪೆನಿಗಳ ಹಾವಳಿ ತಪ್ಪಿಸಿ

ವರುಣ ಮತ್ತು ನಂಜನಗೂಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ಹಲವು ಹಳ್ಳಿಗಳಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳ ಹಾವಳಿ ಹೆಚ್ಚಾಗಿದ್ದು, ಅವರ ಕಿರುಕುಳ ತಾಳಲಾರದೆ ಜನರು ಗ್ರಾಮಗಳನ್ನೇ ತೊರೆಯುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.

ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ, ರಾಂಪುರ, ಕುರಿಹುಂಡಿ, ಶಿರಮಳ್ಳಿ, ಕಗ್ಗಲೂರು, ಹೆಗ್ಗಡಹಳ್ಳಿ, ಮುದ್ದಹಳ್ಳಿ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳಿಗೆ ಹೆದರಿರುವ ಗ್ರಾಮಸ್ಥರು ಗ್ರಾಮಗಳನ್ನೇ ತೊರೆದಿದ್ದಾರೆ. ಹಬ್ಬದ ದಿನಗಳಲ್ಲಿಯೂ ಈ ಗ್ರಾಮಗಳ ಜನರು ಊರಿಗೆ ಬರಲಾಗದ ಸ್ಥಿತಿಯಲ್ಲಿದ್ದಾರೆ.

ಮೀಟರ್ ಬಡ್ಡಿಯ ದಂಧೆಗಿಂತಲೂ ಕಠೋರವಾಗಿ ಈ ಮೈಕ್ರೋ ಫೈನಾನ್ಸ್ ಕಂಪೆನಿಗಳು ವರ್ತಿಸುತ್ತಿದ್ದು, ಜೀವನಾಧಾರಕ್ಕೆಂದು ಸಾಲ ಮಾಡಿದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಸಾಲ ತೀರಿಸಲು ಪರದಾಡುವಂತಾಗಿದೆ. ಮೈಕ್ರೋ ಫೈನಾನ್ಸ್ ಕಂಪೆನಿಗಳು ನೀಡುವ ಸಾಲಕ್ಕೆ ಶೇ. ೪೦ರಷ್ಟು ಬಡ್ಡಿ ಹಾಕುತ್ತವೆ. ಇದರಿಂದ ಸಾಲ ಪಡೆದವರು ತೀರಿಸಲು ಪರದಾಡುವಂತಾಗಿದೆ. ಹಾಗಾಗಿ ಮೈಕ್ರೋ ಫೈನಾನ್ಸ್ ಕಂಪೆನಿಗಳನ್ನು ನಿಷೇಧಿಸಬೇಕು ಎಂದು ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಅಽವೇಶನದಲ್ಲಿ ಕೆಲವು ಶಾಸಕರು ಒತ್ತಾಯಿಸಿದ್ದಾರೆ. ಸಾಲದ ಆಮಿಷಗಳನ್ನು ಒಡ್ಡಿ ಬಲವಂತವಾಗಿ ಸಾಲ ಕೊಡುವ ಮೈಕ್ರೋ ಫೈನಾನ್ಸ್ ಕಂಪೆನಿಗಳಿಗೆ ಸರ್ಕಾರ ಆದಷ್ಟು ಬೇಗ ಕಡಿವಾಣ ಹಾಕಬೇಕು.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

9 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

14 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

18 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

18 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

18 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

21 hours ago