ಮೈಸೂರಿನ ಇಲವಾಲ ಸಮೀಪದ ಸೇಂಟ್ ಜೋಸೆಫ್ ಸೆಂಟ್ರಲ್ ಸ್ಕೂಲ್ ಬಳಿ ಇರುವ ವಿನಾಯಕ ಗಾರ್ಡನ್ ಸಿಟಿ, ಬ್ರಹ್ಮಾನಂದ ಸಾಗರ ಲೇಔಟ್ನ ಬಳಿಯ ರಸ್ತೆ ವಿಭಜಕ(ಡಿವೈಡರ್)ದಲ್ಲಿ ಯು ಟರ್ನ್ ತೆಗೆದುಕೊಳ್ಳಲು ಅವಕಾಶ ನೀಡಿದ್ದು, ಇದು ಅಪಘಾತಕ್ಕೆ ಆಹ್ವಾನ ನೀಡಿದಂತಿದೆ.
ಇಲವಾಲದಿಂದ ಮೈಸೂರಿನ ಕಡೆಗೆ ಸಂಚರಿಸುವ ವಾಹನಗಳು ಅತಿಯಾದ ವೇಗದಲ್ಲಿ ಸಾಗುತ್ತವೆ. ಇದರಿಂದಾಗಿ ವಿನಾಯಕ ಗಾರ್ಡನ್ ಸಿಟಿ ಹಾಗೂ ಅರ್ಬನ್ ವ್ಯಾಲಿ ಲೇಔಟ್ನ ನಿವಾಸಿಗಳು ಇಲವಾಲದ ಕಡೆಗೆ ಹೋಗಲು ಈ ರಸ್ತೆ ವಿಭಜಕವನ್ನು ದಾಟುವ ವೇಳೆ ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಈಗಾಗಲೇ ಈ ಭಾಗದಲ್ಲಿ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿದ್ದು, ಸಾಕಷ್ಟು ದೂರುಗಳು ಕೂಡ ದಾಖಲಾಗಿವೆ. ಆದ್ದರಿಂದ ಸಂಬಂಧಪಟ್ಟವರು ವಿನಾಯಕ ಗಾರ್ಡನ್ ಬಳಿ ಇರುವ ರಸ್ತೆ ವಿಭಜಕದ ಯು ಟರ್ನ್ಅನ್ನು ಮುಚ್ಚಿದರೆ ಅಪಘಾತಗಳನ್ನು ತಪ್ಪಿಸಬಹುದು. ಅಲ್ಲದೆ ಸೇಂಟ್ ಜೋಸೆಫ್ ಸೆಂಟ್ರಲ್ ಶಾಲೆಯ ಬಳಿಯಿಂದ ಇಲವಾಲದವರೆಗೂ ಸರ್ವೀಸ್ ರಸ್ತೆ ನಿರ್ಮಾಣ ಮಾಡಿದರೆ ಅಪಘಾತಗಳನ್ನು ಕಡಿಮೆ ಮಾಡಬಹುದು. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಕ್ರಮವಹಿಸಬೇಕಿದೆ.
-ಸ್ಥಳೀಯ ನಿವಾಸಿಗಳು, ಅರ್ಬನ್ ವ್ಯಾಲಿ ಲೇಔಟ್ ಹಾಗೂ ವಿನಾಯಕ ಗಾರ್ಡನ್ ಸಿಟಿ, ಇಲವಾಲ, ಮೈಸೂರು.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…