ಓದುಗರ ಪತ್ರ

ಓದುಗರ ಪತ್ರ | ಯು ಟರ್ನ್ ನಿಷೇಧಿಸಿ ಅಪಘಾತ ತಪ್ಪಿಸಿ

ಮೈಸೂರಿನ ಇಲವಾಲ ಸಮೀಪದ ಸೇಂಟ್ ಜೋಸೆಫ್ ಸೆಂಟ್ರಲ್ ಸ್ಕೂಲ್ ಬಳಿ ಇರುವ ವಿನಾಯಕ ಗಾರ್ಡನ್ ಸಿಟಿ, ಬ್ರಹ್ಮಾನಂದ ಸಾಗರ ಲೇಔಟ್‌ನ ಬಳಿಯ ರಸ್ತೆ ವಿಭಜಕ(ಡಿವೈಡರ್)ದಲ್ಲಿ ಯು ಟರ್ನ್ ತೆಗೆದುಕೊಳ್ಳಲು ಅವಕಾಶ ನೀಡಿದ್ದು, ಇದು ಅಪಘಾತಕ್ಕೆ ಆಹ್ವಾನ ನೀಡಿದಂತಿದೆ.

ಇಲವಾಲದಿಂದ ಮೈಸೂರಿನ ಕಡೆಗೆ ಸಂಚರಿಸುವ ವಾಹನಗಳು ಅತಿಯಾದ ವೇಗದಲ್ಲಿ ಸಾಗುತ್ತವೆ. ಇದರಿಂದಾಗಿ ವಿನಾಯಕ ಗಾರ್ಡನ್ ಸಿಟಿ ಹಾಗೂ ಅರ್ಬನ್ ವ್ಯಾಲಿ ಲೇಔಟ್‌ನ ನಿವಾಸಿಗಳು ಇಲವಾಲದ ಕಡೆಗೆ ಹೋಗಲು ಈ ರಸ್ತೆ ವಿಭಜಕವನ್ನು ದಾಟುವ ವೇಳೆ ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಈಗಾಗಲೇ ಈ ಭಾಗದಲ್ಲಿ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿದ್ದು, ಸಾಕಷ್ಟು ದೂರುಗಳು ಕೂಡ ದಾಖಲಾಗಿವೆ. ಆದ್ದರಿಂದ ಸಂಬಂಧಪಟ್ಟವರು ವಿನಾಯಕ ಗಾರ್ಡನ್ ಬಳಿ ಇರುವ ರಸ್ತೆ ವಿಭಜಕದ ಯು ಟರ್ನ್‌ಅನ್ನು ಮುಚ್ಚಿದರೆ ಅಪಘಾತಗಳನ್ನು ತಪ್ಪಿಸಬಹುದು. ಅಲ್ಲದೆ ಸೇಂಟ್ ಜೋಸೆಫ್ ಸೆಂಟ್ರಲ್ ಶಾಲೆಯ ಬಳಿಯಿಂದ ಇಲವಾಲದವರೆಗೂ ಸರ್ವೀಸ್ ರಸ್ತೆ ನಿರ್ಮಾಣ ಮಾಡಿದರೆ ಅಪಘಾತಗಳನ್ನು ಕಡಿಮೆ ಮಾಡಬಹುದು. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಕ್ರಮವಹಿಸಬೇಕಿದೆ.

-ಸ್ಥಳೀಯ ನಿವಾಸಿಗಳು, ಅರ್ಬನ್ ವ್ಯಾಲಿ ಲೇಔಟ್ ಹಾಗೂ ವಿನಾಯಕ ಗಾರ್ಡನ್ ಸಿಟಿ, ಇಲವಾಲ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಪಂಜು ಗಂಗೊಳ್ಳಿ ಅವರ ವಾರದ ಅಂಕಣ | ಹೆಣ್ಣು ಭ್ರೂಣ ಹಂತಕ ವೈದ್ಯರನ್ನು ಬೇಟೆಯಾಡುವ ವರ್ಷಾ ದೇಶಪಾಂಡೆ

50ಕ್ಕೂ ಹೆಚ್ಚು ಸ್ಟಿಂಗ್‌ ಆಪರೇಷನ್‌ ; 20 ವೈದ್ಯರುಗಳಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿ ಮಹಾರಾಷ್ಟ್ರದ ಭೀಡ್ ಜಿಲ್ಲೆಯ ಪಾರ್ಲಿ ಗ್ರಾಮದ…

13 mins ago

ರಕ್ತದ ಕ್ಯಾನ್ಸ್‌ರ್‌ಗೆ ಅಸ್ತ್ರ ʼಭಾರತ್‌ ಕ್ಯಾನ್ಸರ್‌ ಆಸ್ಪತ್ರೆʼ

ಮೈಸೂರಿನ ಭಾರತ್‌ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಆಂದೋಲನ ಕಚೇರಿಯಲ್ಲಿ ನಡೆದ ಫೋನ್‌ ಇನ್‌ ಕಾರ್ಯಕ್ರಮ ಮೈಸೂರು : ಕ್ಯಾನ್ಸರ್…

38 mins ago

ಬೆಂಗಳೂರಲ್ಲಿ ಭೀಕರ ಘಟನೆ ; ತನ್ನ ಪ್ರೇಮಿಯನ್ನು ಬೆಂಕಿ ಹಚ್ಚಿ ಕೊಂದ ಪ್ರಿಯತಮೆ

ಬೆಂಗಳೂರು : ಫಾರಿನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಅಂತ ಹೇಳಿ ಪ್ರಿಯಕರನ ಕೈಕಾಲು ಕಟ್ಟಿದ ಪ್ರಿಯತಮೆ ಆತನನ್ನು ಬೆಂಕಿ…

59 mins ago

ಕೊಡಗು | ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ; ಇಬ್ಬರ ಬಂಧನ

ಕೊಡಗು : ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೊನ್ನಂಪೇಟೆ…

1 hour ago

ಕುಶಾಲನಗರ | ಅಪ್ರಾಪ್ತೆಯ ನಿಶ್ಚಿತಾರ್ಥ : ಅಧಿಕಾರಿಗಳಿಂದ ಕ್ರಮ

ಕುಶಾಲನಗರ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ನಿಶ್ಚಿತಾರ್ಥ ನಡೆಸಲು ಮುಂದಾದ ಘಟನೆ ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದ್ದು, ಅಧಿಕಾರಿಗಳು…

2 hours ago

ದೇವನೂರಿನಲ್ಲಿ 9 ಎಕರೆ ಒತ್ತುವರಿ ತೆರವು ; ಎಂಡಿಎ ಕಾರ್ಯಾಚರಣೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ನಗರದ ಹೊರವಲಯದ ದೇವನೂರಿನಲ್ಲಿ ಎರಡು ಕಡೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒತ್ತುವರಿಯಾಗಿದ್ದ…

4 hours ago