ಮೈಸೂರಿನ ಇಲವಾಲ ಸಮೀಪದ ಸೇಂಟ್ ಜೋಸೆಫ್ ಸೆಂಟ್ರಲ್ ಸ್ಕೂಲ್ ಬಳಿ ಇರುವ ವಿನಾಯಕ ಗಾರ್ಡನ್ ಸಿಟಿ, ಬ್ರಹ್ಮಾನಂದ ಸಾಗರ ಲೇಔಟ್ನ ಬಳಿಯ ರಸ್ತೆ ವಿಭಜಕ(ಡಿವೈಡರ್)ದಲ್ಲಿ ಯು ಟರ್ನ್ ತೆಗೆದುಕೊಳ್ಳಲು ಅವಕಾಶ ನೀಡಿದ್ದು, ಇದು ಅಪಘಾತಕ್ಕೆ ಆಹ್ವಾನ ನೀಡಿದಂತಿದೆ.
ಇಲವಾಲದಿಂದ ಮೈಸೂರಿನ ಕಡೆಗೆ ಸಂಚರಿಸುವ ವಾಹನಗಳು ಅತಿಯಾದ ವೇಗದಲ್ಲಿ ಸಾಗುತ್ತವೆ. ಇದರಿಂದಾಗಿ ವಿನಾಯಕ ಗಾರ್ಡನ್ ಸಿಟಿ ಹಾಗೂ ಅರ್ಬನ್ ವ್ಯಾಲಿ ಲೇಔಟ್ನ ನಿವಾಸಿಗಳು ಇಲವಾಲದ ಕಡೆಗೆ ಹೋಗಲು ಈ ರಸ್ತೆ ವಿಭಜಕವನ್ನು ದಾಟುವ ವೇಳೆ ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಈಗಾಗಲೇ ಈ ಭಾಗದಲ್ಲಿ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿದ್ದು, ಸಾಕಷ್ಟು ದೂರುಗಳು ಕೂಡ ದಾಖಲಾಗಿವೆ. ಆದ್ದರಿಂದ ಸಂಬಂಧಪಟ್ಟವರು ವಿನಾಯಕ ಗಾರ್ಡನ್ ಬಳಿ ಇರುವ ರಸ್ತೆ ವಿಭಜಕದ ಯು ಟರ್ನ್ಅನ್ನು ಮುಚ್ಚಿದರೆ ಅಪಘಾತಗಳನ್ನು ತಪ್ಪಿಸಬಹುದು. ಅಲ್ಲದೆ ಸೇಂಟ್ ಜೋಸೆಫ್ ಸೆಂಟ್ರಲ್ ಶಾಲೆಯ ಬಳಿಯಿಂದ ಇಲವಾಲದವರೆಗೂ ಸರ್ವೀಸ್ ರಸ್ತೆ ನಿರ್ಮಾಣ ಮಾಡಿದರೆ ಅಪಘಾತಗಳನ್ನು ಕಡಿಮೆ ಮಾಡಬಹುದು. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಕ್ರಮವಹಿಸಬೇಕಿದೆ.
-ಸ್ಥಳೀಯ ನಿವಾಸಿಗಳು, ಅರ್ಬನ್ ವ್ಯಾಲಿ ಲೇಔಟ್ ಹಾಗೂ ವಿನಾಯಕ ಗಾರ್ಡನ್ ಸಿಟಿ, ಇಲವಾಲ, ಮೈಸೂರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…