Mysore
29
few clouds

Social Media

ಶನಿವಾರ, 14 ಫೆಬ್ರವರಿ 2026
Light
Dark

ಓದುಗರ ಪತ್ರ | ಆಯುಷ್ಮಾನ್ ಕಾರ್ಡ್; ಎಲ್ಲ ಆಸ್ಪತ್ರೆಗಳೂ ಪರಿಗಣಿಸಲಿ

ಇತ್ತೀಚೆಗೆ ಕೇಂದ್ರ ಸರ್ಕಾರವು 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್‌ ಭವ ಯೋಜನೆಯನ್ನು ಜಾರಿಗೆ ತಂದಿರುವುದು ಎಲ್ಲರಿಗೂ ತಿಳಿದಿರುವ ವಿಚಾರ.

ಆದರೆ, ಇತ್ತೀಚೆಗೆ ನನ್ನ ಆರೋಗ್ಯದಲ್ಲಿ ಏರುಪೇರಾದಾಗ ನನ್ನ ಮಗ ನನ್ನನ್ನು ಮೈಸೂರಿನ ಕಾಮಾಕ್ಷಿ ಆಸ್ಪತ್ರೆಯಲ್ಲಿ ದಾಖಲಿಸಿದರು. ಈ ವೇಳೆ ಆಸ್ಪತ್ರೆಯ ಸಿಬ್ಬಂದಿಗೆ ನನ್ನ ಆಯುಷ್ಮಾನ್ ಕಾರ್ಡ್ ತೋರಿಸಿದಾಗ, ಆಸ್ಪತ್ರೆಯ ಸಿಬ್ಬಂದಿ ನಾವು ಈ ಕಾರ್ಡನ್ನು ಪರಿಗಣಿಸುವುದಿಲ್ಲ ಎಂದು ತಿರಸ್ಕರಿಸಿ ಹಣ ಕಟ್ಟಿಸಿಕೊಂಡಿದ್ದಾರೆ.

೮೬ ವರ್ಷ ವಯಸ್ಸಿನ ನನಗೆ ಈ ಕಾರ್ಡಿನ ಅನುಕೂಲ ಸಿಗದಿದ್ದ ಮೇಲೆ ಯಾವ ಪುರುಷಾರ್ಥಕ್ಕಾಗಿ ಸರ್ಕಾರ ಇಂತಹ ಯೋಜನೆಗಳನ್ನು ಜಾರಿಗೆ ತಂದಿದೆ? ಆರೋಗ್ಯ ಸಂಬಂಧ ಯೋಜನೆಗಳನ್ನು ಜಾರಿಗೆ ತಂದ ಮೇಲೆ ಫಲಾನುಭವಿಗಳಿಗೆ ಆ ಯೋಜನೆಯ ಲಾಭ ತಲುಪುವಂತೆ ನೋಡಿಕೊಳ್ಳಬೇಕು. ಒಂದು ವೇಳೆ ಯಾವುದಾದರೂ ಆಸ್ಪತ್ರೆ ಆ ಯೋಜನೆಯನ್ನು ತಿರಸ್ಕರ ಮಾಡಿದ್ದಲ್ಲಿ ಅಂತಹ ಆಸ್ಪತ್ರೆಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕಲ್ಲವೇ?

ಬಡ ಮತ್ತು ಮಧ್ಯಮ ವರ್ಗದ ಜನರು ಇಂತಹ ಯೋಜನೆಗಳನ್ನು ನಂಬಿಕೊಂಡಿರುತ್ತಾರೆ. ಅಂತಹವರಿಗೆ ಪೂರ್ಣವಾಗಿ ಈ ಯೋಜನೆಯ ಲಾಭ ಸಿಗುವಂತೆ ಮಾಡಬೇಕಾದದ್ದು ಸರ್ಕಾರದ ಕರ್ತವ್ಯ. ಆದ್ದರಿಂದ ಸರ್ಕಾರ ಈ ಬಗ್ಗೆ ಗಮನಹರಿಸಿ ಎಲ್ಲ ಆಸ್ಪತ್ರೆಗಳಲ್ಲಿಯೂ ಆಯುಷ್ಮಾನ್ ಕಾರ್ಡ್‌ನ ಯೋಜನೆಯ ಲಾಭ ಸಿಗುವಂತೆ ಮಾಡಬೇಕು.
-ಎ.ಎಸ್.ಗೋಪಾಲಕೃಷ್ಣ, ರಾಮಕೃಷ್ಣನಗರ, ಮೈಸೂರು.

Tags:
error: Content is protected !!