ಇತ್ತೀಚೆಗೆ ಕೇಂದ್ರ ಸರ್ಕಾರವು 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭವ ಯೋಜನೆಯನ್ನು ಜಾರಿಗೆ ತಂದಿರುವುದು ಎಲ್ಲರಿಗೂ ತಿಳಿದಿರುವ ವಿಚಾರ.
ಆದರೆ, ಇತ್ತೀಚೆಗೆ ನನ್ನ ಆರೋಗ್ಯದಲ್ಲಿ ಏರುಪೇರಾದಾಗ ನನ್ನ ಮಗ ನನ್ನನ್ನು ಮೈಸೂರಿನ ಕಾಮಾಕ್ಷಿ ಆಸ್ಪತ್ರೆಯಲ್ಲಿ ದಾಖಲಿಸಿದರು. ಈ ವೇಳೆ ಆಸ್ಪತ್ರೆಯ ಸಿಬ್ಬಂದಿಗೆ ನನ್ನ ಆಯುಷ್ಮಾನ್ ಕಾರ್ಡ್ ತೋರಿಸಿದಾಗ, ಆಸ್ಪತ್ರೆಯ ಸಿಬ್ಬಂದಿ ನಾವು ಈ ಕಾರ್ಡನ್ನು ಪರಿಗಣಿಸುವುದಿಲ್ಲ ಎಂದು ತಿರಸ್ಕರಿಸಿ ಹಣ ಕಟ್ಟಿಸಿಕೊಂಡಿದ್ದಾರೆ.
೮೬ ವರ್ಷ ವಯಸ್ಸಿನ ನನಗೆ ಈ ಕಾರ್ಡಿನ ಅನುಕೂಲ ಸಿಗದಿದ್ದ ಮೇಲೆ ಯಾವ ಪುರುಷಾರ್ಥಕ್ಕಾಗಿ ಸರ್ಕಾರ ಇಂತಹ ಯೋಜನೆಗಳನ್ನು ಜಾರಿಗೆ ತಂದಿದೆ? ಆರೋಗ್ಯ ಸಂಬಂಧ ಯೋಜನೆಗಳನ್ನು ಜಾರಿಗೆ ತಂದ ಮೇಲೆ ಫಲಾನುಭವಿಗಳಿಗೆ ಆ ಯೋಜನೆಯ ಲಾಭ ತಲುಪುವಂತೆ ನೋಡಿಕೊಳ್ಳಬೇಕು. ಒಂದು ವೇಳೆ ಯಾವುದಾದರೂ ಆಸ್ಪತ್ರೆ ಆ ಯೋಜನೆಯನ್ನು ತಿರಸ್ಕರ ಮಾಡಿದ್ದಲ್ಲಿ ಅಂತಹ ಆಸ್ಪತ್ರೆಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕಲ್ಲವೇ?
ಬಡ ಮತ್ತು ಮಧ್ಯಮ ವರ್ಗದ ಜನರು ಇಂತಹ ಯೋಜನೆಗಳನ್ನು ನಂಬಿಕೊಂಡಿರುತ್ತಾರೆ. ಅಂತಹವರಿಗೆ ಪೂರ್ಣವಾಗಿ ಈ ಯೋಜನೆಯ ಲಾಭ ಸಿಗುವಂತೆ ಮಾಡಬೇಕಾದದ್ದು ಸರ್ಕಾರದ ಕರ್ತವ್ಯ. ಆದ್ದರಿಂದ ಸರ್ಕಾರ ಈ ಬಗ್ಗೆ ಗಮನಹರಿಸಿ ಎಲ್ಲ ಆಸ್ಪತ್ರೆಗಳಲ್ಲಿಯೂ ಆಯುಷ್ಮಾನ್ ಕಾರ್ಡ್ನ ಯೋಜನೆಯ ಲಾಭ ಸಿಗುವಂತೆ ಮಾಡಬೇಕು.
-ಎ.ಎಸ್.ಗೋಪಾಲಕೃಷ್ಣ, ರಾಮಕೃಷ್ಣನಗರ, ಮೈಸೂರು.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…