ಇತ್ತೀಚೆಗೆ ಕೇಂದ್ರ ಸರ್ಕಾರವು 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭವ ಯೋಜನೆಯನ್ನು ಜಾರಿಗೆ ತಂದಿರುವುದು ಎಲ್ಲರಿಗೂ ತಿಳಿದಿರುವ ವಿಚಾರ.
ಆದರೆ, ಇತ್ತೀಚೆಗೆ ನನ್ನ ಆರೋಗ್ಯದಲ್ಲಿ ಏರುಪೇರಾದಾಗ ನನ್ನ ಮಗ ನನ್ನನ್ನು ಮೈಸೂರಿನ ಕಾಮಾಕ್ಷಿ ಆಸ್ಪತ್ರೆಯಲ್ಲಿ ದಾಖಲಿಸಿದರು. ಈ ವೇಳೆ ಆಸ್ಪತ್ರೆಯ ಸಿಬ್ಬಂದಿಗೆ ನನ್ನ ಆಯುಷ್ಮಾನ್ ಕಾರ್ಡ್ ತೋರಿಸಿದಾಗ, ಆಸ್ಪತ್ರೆಯ ಸಿಬ್ಬಂದಿ ನಾವು ಈ ಕಾರ್ಡನ್ನು ಪರಿಗಣಿಸುವುದಿಲ್ಲ ಎಂದು ತಿರಸ್ಕರಿಸಿ ಹಣ ಕಟ್ಟಿಸಿಕೊಂಡಿದ್ದಾರೆ.
೮೬ ವರ್ಷ ವಯಸ್ಸಿನ ನನಗೆ ಈ ಕಾರ್ಡಿನ ಅನುಕೂಲ ಸಿಗದಿದ್ದ ಮೇಲೆ ಯಾವ ಪುರುಷಾರ್ಥಕ್ಕಾಗಿ ಸರ್ಕಾರ ಇಂತಹ ಯೋಜನೆಗಳನ್ನು ಜಾರಿಗೆ ತಂದಿದೆ? ಆರೋಗ್ಯ ಸಂಬಂಧ ಯೋಜನೆಗಳನ್ನು ಜಾರಿಗೆ ತಂದ ಮೇಲೆ ಫಲಾನುಭವಿಗಳಿಗೆ ಆ ಯೋಜನೆಯ ಲಾಭ ತಲುಪುವಂತೆ ನೋಡಿಕೊಳ್ಳಬೇಕು. ಒಂದು ವೇಳೆ ಯಾವುದಾದರೂ ಆಸ್ಪತ್ರೆ ಆ ಯೋಜನೆಯನ್ನು ತಿರಸ್ಕರ ಮಾಡಿದ್ದಲ್ಲಿ ಅಂತಹ ಆಸ್ಪತ್ರೆಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕಲ್ಲವೇ?
ಬಡ ಮತ್ತು ಮಧ್ಯಮ ವರ್ಗದ ಜನರು ಇಂತಹ ಯೋಜನೆಗಳನ್ನು ನಂಬಿಕೊಂಡಿರುತ್ತಾರೆ. ಅಂತಹವರಿಗೆ ಪೂರ್ಣವಾಗಿ ಈ ಯೋಜನೆಯ ಲಾಭ ಸಿಗುವಂತೆ ಮಾಡಬೇಕಾದದ್ದು ಸರ್ಕಾರದ ಕರ್ತವ್ಯ. ಆದ್ದರಿಂದ ಸರ್ಕಾರ ಈ ಬಗ್ಗೆ ಗಮನಹರಿಸಿ ಎಲ್ಲ ಆಸ್ಪತ್ರೆಗಳಲ್ಲಿಯೂ ಆಯುಷ್ಮಾನ್ ಕಾರ್ಡ್ನ ಯೋಜನೆಯ ಲಾಭ ಸಿಗುವಂತೆ ಮಾಡಬೇಕು.
-ಎ.ಎಸ್.ಗೋಪಾಲಕೃಷ್ಣ, ರಾಮಕೃಷ್ಣನಗರ, ಮೈಸೂರು.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…