ಓದುಗರ ಪತ್ರ

ಓದುಗರ ಪತ್ರ | ಆಯುಷ್ಮಾನ್ ಕಾರ್ಡ್; ಎಲ್ಲ ಆಸ್ಪತ್ರೆಗಳೂ ಪರಿಗಣಿಸಲಿ

ಇತ್ತೀಚೆಗೆ ಕೇಂದ್ರ ಸರ್ಕಾರವು 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್‌ ಭವ ಯೋಜನೆಯನ್ನು ಜಾರಿಗೆ ತಂದಿರುವುದು ಎಲ್ಲರಿಗೂ ತಿಳಿದಿರುವ ವಿಚಾರ.

ಆದರೆ, ಇತ್ತೀಚೆಗೆ ನನ್ನ ಆರೋಗ್ಯದಲ್ಲಿ ಏರುಪೇರಾದಾಗ ನನ್ನ ಮಗ ನನ್ನನ್ನು ಮೈಸೂರಿನ ಕಾಮಾಕ್ಷಿ ಆಸ್ಪತ್ರೆಯಲ್ಲಿ ದಾಖಲಿಸಿದರು. ಈ ವೇಳೆ ಆಸ್ಪತ್ರೆಯ ಸಿಬ್ಬಂದಿಗೆ ನನ್ನ ಆಯುಷ್ಮಾನ್ ಕಾರ್ಡ್ ತೋರಿಸಿದಾಗ, ಆಸ್ಪತ್ರೆಯ ಸಿಬ್ಬಂದಿ ನಾವು ಈ ಕಾರ್ಡನ್ನು ಪರಿಗಣಿಸುವುದಿಲ್ಲ ಎಂದು ತಿರಸ್ಕರಿಸಿ ಹಣ ಕಟ್ಟಿಸಿಕೊಂಡಿದ್ದಾರೆ.

೮೬ ವರ್ಷ ವಯಸ್ಸಿನ ನನಗೆ ಈ ಕಾರ್ಡಿನ ಅನುಕೂಲ ಸಿಗದಿದ್ದ ಮೇಲೆ ಯಾವ ಪುರುಷಾರ್ಥಕ್ಕಾಗಿ ಸರ್ಕಾರ ಇಂತಹ ಯೋಜನೆಗಳನ್ನು ಜಾರಿಗೆ ತಂದಿದೆ? ಆರೋಗ್ಯ ಸಂಬಂಧ ಯೋಜನೆಗಳನ್ನು ಜಾರಿಗೆ ತಂದ ಮೇಲೆ ಫಲಾನುಭವಿಗಳಿಗೆ ಆ ಯೋಜನೆಯ ಲಾಭ ತಲುಪುವಂತೆ ನೋಡಿಕೊಳ್ಳಬೇಕು. ಒಂದು ವೇಳೆ ಯಾವುದಾದರೂ ಆಸ್ಪತ್ರೆ ಆ ಯೋಜನೆಯನ್ನು ತಿರಸ್ಕರ ಮಾಡಿದ್ದಲ್ಲಿ ಅಂತಹ ಆಸ್ಪತ್ರೆಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕಲ್ಲವೇ?

ಬಡ ಮತ್ತು ಮಧ್ಯಮ ವರ್ಗದ ಜನರು ಇಂತಹ ಯೋಜನೆಗಳನ್ನು ನಂಬಿಕೊಂಡಿರುತ್ತಾರೆ. ಅಂತಹವರಿಗೆ ಪೂರ್ಣವಾಗಿ ಈ ಯೋಜನೆಯ ಲಾಭ ಸಿಗುವಂತೆ ಮಾಡಬೇಕಾದದ್ದು ಸರ್ಕಾರದ ಕರ್ತವ್ಯ. ಆದ್ದರಿಂದ ಸರ್ಕಾರ ಈ ಬಗ್ಗೆ ಗಮನಹರಿಸಿ ಎಲ್ಲ ಆಸ್ಪತ್ರೆಗಳಲ್ಲಿಯೂ ಆಯುಷ್ಮಾನ್ ಕಾರ್ಡ್‌ನ ಯೋಜನೆಯ ಲಾಭ ಸಿಗುವಂತೆ ಮಾಡಬೇಕು.
-ಎ.ಎಸ್.ಗೋಪಾಲಕೃಷ್ಣ, ರಾಮಕೃಷ್ಣನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

1 hour ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

2 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

2 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

2 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

3 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

12 hours ago