ಗುಂಡ್ಲುಪೇಟೆ ತಾಲ್ಲೂಕಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದೊಳಗೆ ನಿತ್ಯ ದ್ವಿಚಕ್ರ ವಾಹನಗಳು ಸಂಚರಿಸುತ್ತಿದ್ದು, ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ.
ಈ ಬಸ್ ನಿಲ್ದಾಣಕ್ಕೆ ರಾಜ್ಯ ಹಾಗೂ ಅಂತರರಾಜ್ಯ ಬಸ್ಗಳು ಬಂದು ಹೋಗು ತ್ತವೆ. ನೂರಾರು ಪ್ರಯಾಣಿಕರು ಇದೇ ಬಸ್ ನಿಲ್ದಾಣಕ್ಕೆ ಬಂದು ಬಸ್ ಹತ್ತುಬೇಕು. ಅಂದಾಜಿನ ಪ್ರಕಾರ ನಿತ್ಯ ಈ ನಿಲ್ದಾಣದಲ್ಲಿ ೨೦೦ಕ್ಕೂ ಅಧಿಕ ಬಸ್ಗಳು ಕಾರ್ಯಾಚರಣೆ ನಡೆಸುತ್ತಿದ್ದು, ಗುಂಡ್ಲುಪೇಟೆ ತಾಲ್ಲೂಕಿನ ಅನೇಕ ಗ್ರಾಮಗಳ ಜನರು, ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಮಹಿಳೆಯರು, ಮಕ್ಕಳು ಈ ಬಸ್ ನಿಲ್ದಾಣಕ್ಕೆ ಬಂದು ಹೋಗುತ್ತಾರೆ. ಆದರೆ ಈ ಬಸ್ ನಿಲ್ದಾಣದೊಳಗೆ ದ್ವಿಚಕ್ರ ವಾಹನ ಸವಾರರು ಯಾವುದೇ ಅಡೆತಡೆ ಇಲ್ಲದೆ ಬೈಕ್ಗಳನ್ನು ಓಡಿಸುತ್ತಿದ್ದು, ಪ್ರಯಾಣಿಕರಿಗೆ ಕಿರಿಕಿರಿಯಾಗುತ್ತಿದೆ. ಪ್ರಯಾಣಿಕರನ್ನು ಬಿಡಲು ಅಥವಾ ಅವರ ಬ್ಯಾಗ್ಗಳನ್ನು ಬಸ್ ಬಳಿ ತಂದು ಇರಿಸಲು ಬೈಕ್ ಗಳಲ್ಲಿ ಬರುವುದೇನೋ ಸರಿ. ಆದರೆ ಕೆಲ ಪುಂಡರು ಹೆಲ್ಮೆಟ್ಅನ್ನೂ ಧರಿಸದೆ ಸುಖಾ ಸುಮ್ಮನೆ ನಿಲ್ದಾಣದೊಳಗೇ ಬೈಕ್ಗಳನ್ನು ವೇಗವಾಗಿ ಚಲಾಯಿಸುತ್ತಿದ್ದು, ಅಪಘಾತಗಳು ಸಂಭವಿಸುವ ಅಪಾಯವಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಮೇಲಽಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಬಸ್ ನಿಲ್ದಾಣದೊಳಗೆ ದ್ವಿಚಕ್ರ ವಾಹನಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕಿದೆ. -ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…