ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿರುವುದು ಸ್ವಾಗತಾರ್ಹವಾಗಿದೆ.
ಹಲವು ರಾಜಕಾರಣಿಗಳು ವಿವಿಯ ಗೌರವ ಡಾಕ್ಟರೇಟ್ಗಳಿಗೆ ಲಾಬಿ ಮಾಡುತ್ತಿರುವ ಕಾಲದಲ್ಲಿ,ಬೊಮ್ಮಾಯಿ ಅವರು ತಮಗೆ ಹಾವೇರಿ ವಿಶ್ವವಿದ್ಯಾಲಯ ನೀಡುತ್ತಿರುವ ಗೌರವ ಪದವಿಯನ್ನು ನಯವಾಗಿ ತಿರಸ್ಕರಿಸಿರುವುದು ರಾಜಕಾರಣಿಗಳಿಗೊಂದು ಮಾದರಿಯ ನಡೆಯಾಗಿದೆ.
ಇತ್ತೀಚಿನ ದಿನಗಳಲ್ಲಿ ಸರ್ಕಾರದ ಅಧಿನದಲ್ಲಿರುವ ಬಹುತೇಕ ವಿಶ್ವವಿದ್ಯಾನಿಲಯಗಳು ರಾಜಕಾರಣಿಗಳಿಗೆ, ಮಂತ್ರಿ ಮಹೋದಯರಿಗೆ, ಜನಪ್ರಿಯ ಚಲನಚಿತ್ರ ತಾರೆಯರಿಗೆ, ಉದ್ಯಮಿಗಳಿಗೆ ಗೌರವ ಡಾಕ್ಟರೇಟ್ ಪದವಿಗಳನ್ನು ನೀಡುತ್ತಿವೆ. ಇವರಲ್ಲಿ ಅರ್ಹರಿಗಿಂತ ಅನರ್ಹರ ಪಾಲೇ ಹೆಚ್ಚಾಗಿರುತ್ತದೆ. ವಿವಿಧ ಕ್ಷೇತ್ರದ ನಿಜವಾದ ಗಣ್ಯ ಸಾಧಕರನ್ನು ಗುರುತಿಸದೇ ಇರುವುದು ಬೇಸರದ ಸಂಗತಿಯಾಗಿದೆ.
ಬಸವರಾಜ ಬೊಮ್ಮಾಯಿ ಅವರ ನಿಲುವನ್ನು ಉಳಿದ ರಾಜಕಾರಣಿಗಳು ಮತ್ತು ಉದ್ಯಮಿಗಳು ತಾಳುವುದು ಅಗತ್ಯ. ಇನ್ನು ಮುಂದಾದರೂ ವಿವಿಗಳು ಗೌರವ ಡಾಕ್ಟರೇಟ್ ಮತ್ತು ‘ನಾಡೋಜ’ ಪದವಿಯನ್ನು ರಾಜಕಾರಣಿಗಳು, ಚಿತ್ರನಟರನ್ನು ಹೊರತುಪಡಿಸಿ ವಿವಿಧ ಕ್ಷೇತ್ರಗಳಲ್ಲಿ ಎಲೆ ಮರೆಯ ಕಾಯಿಯಂತಿರುವ ಸಾಧಕರನ್ನು ಗುರುತಿಸಿ ನೀಡುವುದು ಔತ್ಯ.
-ಟಿ. ಸತೀಶ್ ಜವರೇಗೌಡ, ಮಂಡ್ಯ
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…