ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿರುವುದು ಸ್ವಾಗತಾರ್ಹವಾಗಿದೆ.
ಹಲವು ರಾಜಕಾರಣಿಗಳು ವಿವಿಯ ಗೌರವ ಡಾಕ್ಟರೇಟ್ಗಳಿಗೆ ಲಾಬಿ ಮಾಡುತ್ತಿರುವ ಕಾಲದಲ್ಲಿ,ಬೊಮ್ಮಾಯಿ ಅವರು ತಮಗೆ ಹಾವೇರಿ ವಿಶ್ವವಿದ್ಯಾಲಯ ನೀಡುತ್ತಿರುವ ಗೌರವ ಪದವಿಯನ್ನು ನಯವಾಗಿ ತಿರಸ್ಕರಿಸಿರುವುದು ರಾಜಕಾರಣಿಗಳಿಗೊಂದು ಮಾದರಿಯ ನಡೆಯಾಗಿದೆ.
ಇತ್ತೀಚಿನ ದಿನಗಳಲ್ಲಿ ಸರ್ಕಾರದ ಅಧಿನದಲ್ಲಿರುವ ಬಹುತೇಕ ವಿಶ್ವವಿದ್ಯಾನಿಲಯಗಳು ರಾಜಕಾರಣಿಗಳಿಗೆ, ಮಂತ್ರಿ ಮಹೋದಯರಿಗೆ, ಜನಪ್ರಿಯ ಚಲನಚಿತ್ರ ತಾರೆಯರಿಗೆ, ಉದ್ಯಮಿಗಳಿಗೆ ಗೌರವ ಡಾಕ್ಟರೇಟ್ ಪದವಿಗಳನ್ನು ನೀಡುತ್ತಿವೆ. ಇವರಲ್ಲಿ ಅರ್ಹರಿಗಿಂತ ಅನರ್ಹರ ಪಾಲೇ ಹೆಚ್ಚಾಗಿರುತ್ತದೆ. ವಿವಿಧ ಕ್ಷೇತ್ರದ ನಿಜವಾದ ಗಣ್ಯ ಸಾಧಕರನ್ನು ಗುರುತಿಸದೇ ಇರುವುದು ಬೇಸರದ ಸಂಗತಿಯಾಗಿದೆ.
ಬಸವರಾಜ ಬೊಮ್ಮಾಯಿ ಅವರ ನಿಲುವನ್ನು ಉಳಿದ ರಾಜಕಾರಣಿಗಳು ಮತ್ತು ಉದ್ಯಮಿಗಳು ತಾಳುವುದು ಅಗತ್ಯ. ಇನ್ನು ಮುಂದಾದರೂ ವಿವಿಗಳು ಗೌರವ ಡಾಕ್ಟರೇಟ್ ಮತ್ತು ‘ನಾಡೋಜ’ ಪದವಿಯನ್ನು ರಾಜಕಾರಣಿಗಳು, ಚಿತ್ರನಟರನ್ನು ಹೊರತುಪಡಿಸಿ ವಿವಿಧ ಕ್ಷೇತ್ರಗಳಲ್ಲಿ ಎಲೆ ಮರೆಯ ಕಾಯಿಯಂತಿರುವ ಸಾಧಕರನ್ನು ಗುರುತಿಸಿ ನೀಡುವುದು ಔತ್ಯ.
-ಟಿ. ಸತೀಶ್ ಜವರೇಗೌಡ, ಮಂಡ್ಯ
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…