ಓದುಗರ ಪತ್ರ

ಓದುಗರ ಪತ್ರ | ಗಣಪತಿ ವಿಸರ್ಜಿಸುವ ವೇಳೆ ಜಾಗ್ರತೆ ವಹಿಸಿ

ಗಣೇಶ ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಗ್ರಾಮದ ಪ್ರತಿ ಬೀದಿಯಲ್ಲಿಯೂ ಯುವಕರು ಒಗ್ಗೂಡಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಸಂಭ್ರಮದಿಂದ ಪೂಜಿಸುತ್ತಾರೆ.

ಕೆಲವೆಡೆ ಮೂರು ದಿನಗಳ ಕಾಲ ಗಣಪತಿ ಮೂರ್ತಿಯನ್ನು ಕೂರಿಸಿ ಪೂಜಿಸಿದರೆ, ಇನ್ನೂ ಕೆಲ ಭಾಗಗಳಲ್ಲಿ ತಿಂಗಳುಗಟ್ಟಲೇ ಪೂಜಿಸುವವರೂ ಇದ್ದಾರೆ. ನಿಗದಿತ ಸಮಯ ಮುಗಿದ ಬಳಿಕ ಗಣಪತಿ ಮೂರ್ತಿಯನ್ನು ಕೆರೆ, ಬಾವಿ, ನದಿಯಲ್ಲಿ ವಿಸರ್ಜಿಸುವುದು ವಾಡಿಕೆ. ಈ ವೇಳೆ ನಿರ್ಲಕ್ಷ್ಯ ದಿಂದಾಗಿ ವಿಸರ್ಜಿಸಲು ಹೋದವರು ನೀರುಪಾಲಾದ ಸಾಕಷ್ಟು ಘಟನೆಗಳೂ ನಡೆದಿವೆ.

ಸ್ಥಳೀಯ ಆಡಳಿತ ಎಷ್ಟೇ ಜಾಗ್ರತೆವಹಿಸಿ ನಿಗದಿಪಡಿಸಿದ ಸ್ಥಳದಲ್ಲೇ ಗಣಪತಿ ವಿಸರ್ಜಿಸುವಂತೆ ಸೂಚಿಸಿದರೂ ಯಾವುದನ್ನೂ ಲೆಕ್ಕಿಸದೆ ಅಪಾಯಕಾರಿ ಸ್ಥಳಗಳಲ್ಲಿ ಗಣಪತಿ ಮೂರ್ತಿ ವಿಸರ್ಜಿಸಲು ಹೋಗಿ ಅಪಾಯಕ್ಕೆ ಈಡಾಗುತ್ತಿದ್ದಾರೆ. ಅಲ್ಲದೆ ರಾಸಾಯನಿಕ ಬಣ್ಣಗಳಿಂದ ಕೂಡಿದ ಗಣಪತಿ ಮೂರ್ತಿಗಳ ಬಳಕೆ ಹೆಚ್ಚಾಗುತ್ತಿದ್ದು, ಇವುಗಳನ್ನು ನೀರಿನ ಮೂಲಗಳಲ್ಲಿ ಬಿಡುವುದರಿಂದ ಜಲ ಮಾಲಿನ್ಯವೂ ಉಂಟಾಗುತ್ತಿದೆ. ಆದ್ದರಿಂದ ಸ್ಥಳೀಯ ಆಡಳಿತ ಪರಿಸರ ಸ್ನೇಹಿ ಗಣಪನ ಮೂರ್ತಿಯನ್ನು ಕೂರಿಸುವಂತೆ ಜಾಗೃತಿ ಮೂಡಿಸುವ ಜತೆಗೆ ಗಣಪತಿ ವಿಸರ್ಜನೆ ವೇಳೆ ಕೆರೆ, ನದಿ, ಬಾವಿಗಳ ಸಮೀಪ ದೋಣಿಗಳ ವ್ಯವಸ್ಥೆ ಮಾಡಿಕೊಳ್ಳುವಂತೆಯೂ ಸೂಚನೆ ನೀಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

13 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

14 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

19 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

19 hours ago