ಓದುಗರ ಪತ್ರ

ಓದುಗರ ಪತ್ರ | ಗಣಪತಿ ವಿಸರ್ಜಿಸುವ ವೇಳೆ ಜಾಗ್ರತೆ ವಹಿಸಿ

ಗಣೇಶ ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಗ್ರಾಮದ ಪ್ರತಿ ಬೀದಿಯಲ್ಲಿಯೂ ಯುವಕರು ಒಗ್ಗೂಡಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಸಂಭ್ರಮದಿಂದ ಪೂಜಿಸುತ್ತಾರೆ.

ಕೆಲವೆಡೆ ಮೂರು ದಿನಗಳ ಕಾಲ ಗಣಪತಿ ಮೂರ್ತಿಯನ್ನು ಕೂರಿಸಿ ಪೂಜಿಸಿದರೆ, ಇನ್ನೂ ಕೆಲ ಭಾಗಗಳಲ್ಲಿ ತಿಂಗಳುಗಟ್ಟಲೇ ಪೂಜಿಸುವವರೂ ಇದ್ದಾರೆ. ನಿಗದಿತ ಸಮಯ ಮುಗಿದ ಬಳಿಕ ಗಣಪತಿ ಮೂರ್ತಿಯನ್ನು ಕೆರೆ, ಬಾವಿ, ನದಿಯಲ್ಲಿ ವಿಸರ್ಜಿಸುವುದು ವಾಡಿಕೆ. ಈ ವೇಳೆ ನಿರ್ಲಕ್ಷ್ಯ ದಿಂದಾಗಿ ವಿಸರ್ಜಿಸಲು ಹೋದವರು ನೀರುಪಾಲಾದ ಸಾಕಷ್ಟು ಘಟನೆಗಳೂ ನಡೆದಿವೆ.

ಸ್ಥಳೀಯ ಆಡಳಿತ ಎಷ್ಟೇ ಜಾಗ್ರತೆವಹಿಸಿ ನಿಗದಿಪಡಿಸಿದ ಸ್ಥಳದಲ್ಲೇ ಗಣಪತಿ ವಿಸರ್ಜಿಸುವಂತೆ ಸೂಚಿಸಿದರೂ ಯಾವುದನ್ನೂ ಲೆಕ್ಕಿಸದೆ ಅಪಾಯಕಾರಿ ಸ್ಥಳಗಳಲ್ಲಿ ಗಣಪತಿ ಮೂರ್ತಿ ವಿಸರ್ಜಿಸಲು ಹೋಗಿ ಅಪಾಯಕ್ಕೆ ಈಡಾಗುತ್ತಿದ್ದಾರೆ. ಅಲ್ಲದೆ ರಾಸಾಯನಿಕ ಬಣ್ಣಗಳಿಂದ ಕೂಡಿದ ಗಣಪತಿ ಮೂರ್ತಿಗಳ ಬಳಕೆ ಹೆಚ್ಚಾಗುತ್ತಿದ್ದು, ಇವುಗಳನ್ನು ನೀರಿನ ಮೂಲಗಳಲ್ಲಿ ಬಿಡುವುದರಿಂದ ಜಲ ಮಾಲಿನ್ಯವೂ ಉಂಟಾಗುತ್ತಿದೆ. ಆದ್ದರಿಂದ ಸ್ಥಳೀಯ ಆಡಳಿತ ಪರಿಸರ ಸ್ನೇಹಿ ಗಣಪನ ಮೂರ್ತಿಯನ್ನು ಕೂರಿಸುವಂತೆ ಜಾಗೃತಿ ಮೂಡಿಸುವ ಜತೆಗೆ ಗಣಪತಿ ವಿಸರ್ಜನೆ ವೇಳೆ ಕೆರೆ, ನದಿ, ಬಾವಿಗಳ ಸಮೀಪ ದೋಣಿಗಳ ವ್ಯವಸ್ಥೆ ಮಾಡಿಕೊಳ್ಳುವಂತೆಯೂ ಸೂಚನೆ ನೀಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

14 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

18 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

18 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

18 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

21 hours ago