ಗಣೇಶ ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಗ್ರಾಮದ ಪ್ರತಿ ಬೀದಿಯಲ್ಲಿಯೂ ಯುವಕರು ಒಗ್ಗೂಡಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಸಂಭ್ರಮದಿಂದ ಪೂಜಿಸುತ್ತಾರೆ.
ಕೆಲವೆಡೆ ಮೂರು ದಿನಗಳ ಕಾಲ ಗಣಪತಿ ಮೂರ್ತಿಯನ್ನು ಕೂರಿಸಿ ಪೂಜಿಸಿದರೆ, ಇನ್ನೂ ಕೆಲ ಭಾಗಗಳಲ್ಲಿ ತಿಂಗಳುಗಟ್ಟಲೇ ಪೂಜಿಸುವವರೂ ಇದ್ದಾರೆ. ನಿಗದಿತ ಸಮಯ ಮುಗಿದ ಬಳಿಕ ಗಣಪತಿ ಮೂರ್ತಿಯನ್ನು ಕೆರೆ, ಬಾವಿ, ನದಿಯಲ್ಲಿ ವಿಸರ್ಜಿಸುವುದು ವಾಡಿಕೆ. ಈ ವೇಳೆ ನಿರ್ಲಕ್ಷ್ಯ ದಿಂದಾಗಿ ವಿಸರ್ಜಿಸಲು ಹೋದವರು ನೀರುಪಾಲಾದ ಸಾಕಷ್ಟು ಘಟನೆಗಳೂ ನಡೆದಿವೆ.
ಸ್ಥಳೀಯ ಆಡಳಿತ ಎಷ್ಟೇ ಜಾಗ್ರತೆವಹಿಸಿ ನಿಗದಿಪಡಿಸಿದ ಸ್ಥಳದಲ್ಲೇ ಗಣಪತಿ ವಿಸರ್ಜಿಸುವಂತೆ ಸೂಚಿಸಿದರೂ ಯಾವುದನ್ನೂ ಲೆಕ್ಕಿಸದೆ ಅಪಾಯಕಾರಿ ಸ್ಥಳಗಳಲ್ಲಿ ಗಣಪತಿ ಮೂರ್ತಿ ವಿಸರ್ಜಿಸಲು ಹೋಗಿ ಅಪಾಯಕ್ಕೆ ಈಡಾಗುತ್ತಿದ್ದಾರೆ. ಅಲ್ಲದೆ ರಾಸಾಯನಿಕ ಬಣ್ಣಗಳಿಂದ ಕೂಡಿದ ಗಣಪತಿ ಮೂರ್ತಿಗಳ ಬಳಕೆ ಹೆಚ್ಚಾಗುತ್ತಿದ್ದು, ಇವುಗಳನ್ನು ನೀರಿನ ಮೂಲಗಳಲ್ಲಿ ಬಿಡುವುದರಿಂದ ಜಲ ಮಾಲಿನ್ಯವೂ ಉಂಟಾಗುತ್ತಿದೆ. ಆದ್ದರಿಂದ ಸ್ಥಳೀಯ ಆಡಳಿತ ಪರಿಸರ ಸ್ನೇಹಿ ಗಣಪನ ಮೂರ್ತಿಯನ್ನು ಕೂರಿಸುವಂತೆ ಜಾಗೃತಿ ಮೂಡಿಸುವ ಜತೆಗೆ ಗಣಪತಿ ವಿಸರ್ಜನೆ ವೇಳೆ ಕೆರೆ, ನದಿ, ಬಾವಿಗಳ ಸಮೀಪ ದೋಣಿಗಳ ವ್ಯವಸ್ಥೆ ಮಾಡಿಕೊಳ್ಳುವಂತೆಯೂ ಸೂಚನೆ ನೀಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…