ಗುಂಡ್ಲುಪೇಟೆ-ಮೈಸೂರು ಮಾರ್ಗವಾಗಿ ಸಂಚರಿಸುವ ಕೆಎಸ್ ಆರ್ ಟಿಸಿ ಬಸ್ನಲ್ಲಿ ಕಂಡಕ್ಟರ್ ಒಬ್ಬರು ಪ್ರಯಾಣಿಕರು ಚಿಲ್ಲರೆ ನೀಡಿಲ್ಲ ಎಂಬ ಕಾರಣಕ್ಕಾಗಿ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಏಕವಚನದಲ್ಲಿ ನಿಂದಿಸಿದ್ದಲ್ಲದೇ ನಿಮ್ಮಂತಹವರು ಏಕಾಗಿ ಬರುತ್ತೀರಿ, ಬಸ್ಸಿಂದ ಕೆಳ ಗಿಳಿರಿ’ ಎಂದು ಹೇಳಿರುವುದಾಗಿ ವರದಿ ಯಾಗಿದೆ.
ಪ್ರಯಾಣಿಕರಿಗೆ ಚಿಲ್ಲರೆ ಸಮಸ್ಯೆ ಕಾಡದಿರಲಿ ಹಾಗೂ ಸುಲಭವಾಗಿ ಹಣ ಪಾವತಿಸಿ ಟಿಕೆಟ್ ಪಡೆದುಕೊಳ್ಳಲಿ ಎಂಬ ಉದ್ದೇಶದಿಂದ ಸರ್ಕಾರ ಎಲ್ಲ ಸರ್ಕಾರಿ ಬಸ್ಗಳಲ್ಲಿಯೂ ಆನ್ಲೈನ್ ಪೇಮೆಂಟ್ಗಾಗಿ ಕ್ಯೂಆರ್ ಕೋಡ್ ಬಳಸುವಂತೆ ನಿರ್ವಾಹಕರಿಗೆ ಸೂಚಿಸಿದೆ. ಆದರೆ ಇದು ನಗರ ಭಾಗಗಳಲ್ಲಿ ಸಂಚರಿಸುವ ಬಸ್ಗಳಿಗೆ ಮಾತ್ರ ಸೀಮಿತವಾಗಿದ್ದು, ಗ್ರಾಮೀಣ ಭಾಗದ ಬಸ್ಗಳಲ್ಲಿ ಕ್ಯೂಆರ್ ಕೋಡ್ ಬಳಸುತ್ತಿಲ್ಲ. ಇದ ರಿಂದಾಗಿ ಪ್ರಯಾಣಿಕರಿಗೆ ಚಿಲ್ಲರೆ ಸಮಸ್ಯೆ ಕಾಡುತ್ತಿದ್ದು, ಚಿಲ್ಲರೆ ಕೊಡದ ಪ್ರಯಾಣಿಕರನ್ನು ನಿರ್ವಾಹಕರು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ.
ಇತ್ತೀಚೆಗೆ ಕಂಡಕ್ಟರ್ಗಳ ವರ್ತನೆ ಮಿತಿ ಮೀರಿದ್ದು, ಸರ್ಕಾರ ಕೂಡಲೇ ಇವರ ವಿರುದ್ಧ ಕ್ರಮಕೈಗೊಳ್ಳಬೇಕು. –ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಶ್ರೇಯಸ್ ದೇವನೂರು ಭಾರತದ ಅರಣ್ಯಗಳು ಕೇವಲ ಮರಗಳ ಗುಂಪಲ್ಲ; ಅವು ಜೀವವೈವಿಧ್ಯದ ಅದ್ಭುತ ಭಂಡಾರ. ಅಲ್ಲಿ ಪ್ರತಿಯೊಂದು ಕ್ಷಣವೂ ಅನಿರೀಕ್ಷಿತ,…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ವಲಯದ ಕೆಲವೆಡೆ ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ಕೆಲವು ಸಿಬ್ಬಂದಿ ಗಾಯಗೊಂಡಿದ್ದರು.…
ರೈತರು, ಕಾಡುಪ್ರಾಣಿಗಳಿಗೆ ನೀರಿನ ತೊಂದರೆ ; ಶೀಘ್ರದಲ್ಲಿ ಹೂಳು ತೆಗೆಸಲು ಆಗ್ರಹ ಹನೂರು : ಉಡುತೊರೆ ಹಳ್ಳ ಜಲಾಶಯ ನಿರ್ಮಾಣವಾದ…
ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು…
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…