ಗುಂಡ್ಲುಪೇಟೆ-ಮೈಸೂರು ಮಾರ್ಗವಾಗಿ ಸಂಚರಿಸುವ ಕೆಎಸ್ ಆರ್ ಟಿಸಿ ಬಸ್ನಲ್ಲಿ ಕಂಡಕ್ಟರ್ ಒಬ್ಬರು ಪ್ರಯಾಣಿಕರು ಚಿಲ್ಲರೆ ನೀಡಿಲ್ಲ ಎಂಬ ಕಾರಣಕ್ಕಾಗಿ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಏಕವಚನದಲ್ಲಿ ನಿಂದಿಸಿದ್ದಲ್ಲದೇ ನಿಮ್ಮಂತಹವರು ಏಕಾಗಿ ಬರುತ್ತೀರಿ, ಬಸ್ಸಿಂದ ಕೆಳ ಗಿಳಿರಿ’ ಎಂದು ಹೇಳಿರುವುದಾಗಿ ವರದಿ ಯಾಗಿದೆ.
ಪ್ರಯಾಣಿಕರಿಗೆ ಚಿಲ್ಲರೆ ಸಮಸ್ಯೆ ಕಾಡದಿರಲಿ ಹಾಗೂ ಸುಲಭವಾಗಿ ಹಣ ಪಾವತಿಸಿ ಟಿಕೆಟ್ ಪಡೆದುಕೊಳ್ಳಲಿ ಎಂಬ ಉದ್ದೇಶದಿಂದ ಸರ್ಕಾರ ಎಲ್ಲ ಸರ್ಕಾರಿ ಬಸ್ಗಳಲ್ಲಿಯೂ ಆನ್ಲೈನ್ ಪೇಮೆಂಟ್ಗಾಗಿ ಕ್ಯೂಆರ್ ಕೋಡ್ ಬಳಸುವಂತೆ ನಿರ್ವಾಹಕರಿಗೆ ಸೂಚಿಸಿದೆ. ಆದರೆ ಇದು ನಗರ ಭಾಗಗಳಲ್ಲಿ ಸಂಚರಿಸುವ ಬಸ್ಗಳಿಗೆ ಮಾತ್ರ ಸೀಮಿತವಾಗಿದ್ದು, ಗ್ರಾಮೀಣ ಭಾಗದ ಬಸ್ಗಳಲ್ಲಿ ಕ್ಯೂಆರ್ ಕೋಡ್ ಬಳಸುತ್ತಿಲ್ಲ. ಇದ ರಿಂದಾಗಿ ಪ್ರಯಾಣಿಕರಿಗೆ ಚಿಲ್ಲರೆ ಸಮಸ್ಯೆ ಕಾಡುತ್ತಿದ್ದು, ಚಿಲ್ಲರೆ ಕೊಡದ ಪ್ರಯಾಣಿಕರನ್ನು ನಿರ್ವಾಹಕರು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ.
ಇತ್ತೀಚೆಗೆ ಕಂಡಕ್ಟರ್ಗಳ ವರ್ತನೆ ಮಿತಿ ಮೀರಿದ್ದು, ಸರ್ಕಾರ ಕೂಡಲೇ ಇವರ ವಿರುದ್ಧ ಕ್ರಮಕೈಗೊಳ್ಳಬೇಕು. –ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…