ಗುಂಡ್ಲುಪೇಟೆ-ಮೈಸೂರು ಮಾರ್ಗವಾಗಿ ಸಂಚರಿಸುವ ಕೆಎಸ್ ಆರ್ ಟಿಸಿ ಬಸ್ನಲ್ಲಿ ಕಂಡಕ್ಟರ್ ಒಬ್ಬರು ಪ್ರಯಾಣಿಕರು ಚಿಲ್ಲರೆ ನೀಡಿಲ್ಲ ಎಂಬ ಕಾರಣಕ್ಕಾಗಿ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಏಕವಚನದಲ್ಲಿ ನಿಂದಿಸಿದ್ದಲ್ಲದೇ ನಿಮ್ಮಂತಹವರು ಏಕಾಗಿ ಬರುತ್ತೀರಿ, ಬಸ್ಸಿಂದ ಕೆಳ ಗಿಳಿರಿ’ ಎಂದು ಹೇಳಿರುವುದಾಗಿ ವರದಿ ಯಾಗಿದೆ.
ಪ್ರಯಾಣಿಕರಿಗೆ ಚಿಲ್ಲರೆ ಸಮಸ್ಯೆ ಕಾಡದಿರಲಿ ಹಾಗೂ ಸುಲಭವಾಗಿ ಹಣ ಪಾವತಿಸಿ ಟಿಕೆಟ್ ಪಡೆದುಕೊಳ್ಳಲಿ ಎಂಬ ಉದ್ದೇಶದಿಂದ ಸರ್ಕಾರ ಎಲ್ಲ ಸರ್ಕಾರಿ ಬಸ್ಗಳಲ್ಲಿಯೂ ಆನ್ಲೈನ್ ಪೇಮೆಂಟ್ಗಾಗಿ ಕ್ಯೂಆರ್ ಕೋಡ್ ಬಳಸುವಂತೆ ನಿರ್ವಾಹಕರಿಗೆ ಸೂಚಿಸಿದೆ. ಆದರೆ ಇದು ನಗರ ಭಾಗಗಳಲ್ಲಿ ಸಂಚರಿಸುವ ಬಸ್ಗಳಿಗೆ ಮಾತ್ರ ಸೀಮಿತವಾಗಿದ್ದು, ಗ್ರಾಮೀಣ ಭಾಗದ ಬಸ್ಗಳಲ್ಲಿ ಕ್ಯೂಆರ್ ಕೋಡ್ ಬಳಸುತ್ತಿಲ್ಲ. ಇದ ರಿಂದಾಗಿ ಪ್ರಯಾಣಿಕರಿಗೆ ಚಿಲ್ಲರೆ ಸಮಸ್ಯೆ ಕಾಡುತ್ತಿದ್ದು, ಚಿಲ್ಲರೆ ಕೊಡದ ಪ್ರಯಾಣಿಕರನ್ನು ನಿರ್ವಾಹಕರು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ.
ಇತ್ತೀಚೆಗೆ ಕಂಡಕ್ಟರ್ಗಳ ವರ್ತನೆ ಮಿತಿ ಮೀರಿದ್ದು, ಸರ್ಕಾರ ಕೂಡಲೇ ಇವರ ವಿರುದ್ಧ ಕ್ರಮಕೈಗೊಳ್ಳಬೇಕು. –ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…