ಸರ್ ಎಂ.ವಿಶ್ವೇಶ್ವರಯ್ಯನವರು ಆರಂಭಿಸಿದ ಕರ್ನಾಟಕದ ಮೊದಲ ಕಾರ್ಖಾನೆ ಎಂದೇ ಕರೆಯಲ್ಪಡುವ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನ ಮತ್ತು ಉಕ್ಕು ಕಾರ್ಖಾನೆ ಸ್ಥಗಿತವಾಗಿ ಸಾವಿರಾರು ಕಾರ್ಮಿಕರ ಕುಟುಂಬಗಳು ಬೀದಿಗೆ ಬೀಳುವಂತೆ ಮಾಡಿದೆ.
ಈ ಕಾರ್ಖಾನೆ ಸಾವಿರಾರು ಮಂದಿಗೆ ಉದ್ಯೋಗ ನೀಡಿತ್ತು. ಅನೇಕ ಕುಟುಂಬಗಳವರು ಈ ಕಾರ್ಖಾನೆಯ ಉದ್ಯೋಗವನ್ನೇ ಆಧರಿಸಿ ಜೀವನ ಸಾಗಿಸುತ್ತಿದ್ದರು. ಆದರೆ ಕಾರಣಾಂತರಗಳಿಂದ ಈ ಕಾರ್ಖಾನೆಯನ್ನು ಮುಚ್ಚಲಾಗಿದ್ದು, ಇಲ್ಲಿನ ನೌಕರರ ಬದುಕು ಬೀದಿಗೆ ಬರುವಂತೆ ಮಾಡಿದೆ. ಪ್ರಸ್ತುತ ಕರ್ನಾಟಕದವರೇ ಆದ ಎಚ್.ಡಿ.ಕುಮಾರಸ್ವಾಮಿಯವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿದ್ದು, ಈ ಕಾರ್ಖಾನೆಯ ಪುನರಾರಂಭಕ್ಕೆ ಕ್ರಮವಹಿಸಬಹುದು ಎಂಬ ವಿಶ್ವಾಸ ಇಲ್ಲಿನ ಸಿಬ್ಬಂದಿಯಲ್ಲಿ ಮೂಡಿದೆ. ಒಂದು ವೇಳೆ ಕಾರ್ಖಾನೆ ಪುನರಾರಂಭಗೊಂಡಲ್ಲಿ ಸ್ಥಳೀಯರಿಗೆ ಉದ್ಯೋಗ ದೊರಕುವುದಲ್ಲದೇ ಉಕ್ಕಿನ ನಗರಿ ಎಂದೇ ಖ್ಯಾತಿ ಪಡೆದಿರುವ ಭದ್ರಾವತಿಯಲ್ಲಿ ವಾಣಿಜ್ಯ ಚಟುವಟಿಕೆಗಳೂ ಚುರುಕುಗೊಂಡು ಜನರು ಆರ್ಥಿಕವಾಗಿ ಸಬಲರಾಗಲಿದ್ದಾರೆ. ಆದ್ದರಿಂದ ಸಚಿವ ಕುಮಾರಸ್ವಾಮಿಯವರು ಈ ಕಾರ್ಖಾನೆಯ ಪುನರಾರಂಭಕ್ಕೆ ಕ್ರಮ ಕೈಗೊಳ್ಳಬೇಕಿದೆ.
-ಸಂಜಯ್, ಪತ್ರಿಕೋದ್ಯಮ ವಿಭಾಗ, ಮಾನಸಗಂಗೋತ್ರಿ, ಮೈಸೂರು.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…