ಸರ್ ಎಂ.ವಿಶ್ವೇಶ್ವರಯ್ಯನವರು ಆರಂಭಿಸಿದ ಕರ್ನಾಟಕದ ಮೊದಲ ಕಾರ್ಖಾನೆ ಎಂದೇ ಕರೆಯಲ್ಪಡುವ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನ ಮತ್ತು ಉಕ್ಕು ಕಾರ್ಖಾನೆ ಸ್ಥಗಿತವಾಗಿ ಸಾವಿರಾರು ಕಾರ್ಮಿಕರ ಕುಟುಂಬಗಳು ಬೀದಿಗೆ ಬೀಳುವಂತೆ ಮಾಡಿದೆ.
ಈ ಕಾರ್ಖಾನೆ ಸಾವಿರಾರು ಮಂದಿಗೆ ಉದ್ಯೋಗ ನೀಡಿತ್ತು. ಅನೇಕ ಕುಟುಂಬಗಳವರು ಈ ಕಾರ್ಖಾನೆಯ ಉದ್ಯೋಗವನ್ನೇ ಆಧರಿಸಿ ಜೀವನ ಸಾಗಿಸುತ್ತಿದ್ದರು. ಆದರೆ ಕಾರಣಾಂತರಗಳಿಂದ ಈ ಕಾರ್ಖಾನೆಯನ್ನು ಮುಚ್ಚಲಾಗಿದ್ದು, ಇಲ್ಲಿನ ನೌಕರರ ಬದುಕು ಬೀದಿಗೆ ಬರುವಂತೆ ಮಾಡಿದೆ. ಪ್ರಸ್ತುತ ಕರ್ನಾಟಕದವರೇ ಆದ ಎಚ್.ಡಿ.ಕುಮಾರಸ್ವಾಮಿಯವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿದ್ದು, ಈ ಕಾರ್ಖಾನೆಯ ಪುನರಾರಂಭಕ್ಕೆ ಕ್ರಮವಹಿಸಬಹುದು ಎಂಬ ವಿಶ್ವಾಸ ಇಲ್ಲಿನ ಸಿಬ್ಬಂದಿಯಲ್ಲಿ ಮೂಡಿದೆ. ಒಂದು ವೇಳೆ ಕಾರ್ಖಾನೆ ಪುನರಾರಂಭಗೊಂಡಲ್ಲಿ ಸ್ಥಳೀಯರಿಗೆ ಉದ್ಯೋಗ ದೊರಕುವುದಲ್ಲದೇ ಉಕ್ಕಿನ ನಗರಿ ಎಂದೇ ಖ್ಯಾತಿ ಪಡೆದಿರುವ ಭದ್ರಾವತಿಯಲ್ಲಿ ವಾಣಿಜ್ಯ ಚಟುವಟಿಕೆಗಳೂ ಚುರುಕುಗೊಂಡು ಜನರು ಆರ್ಥಿಕವಾಗಿ ಸಬಲರಾಗಲಿದ್ದಾರೆ. ಆದ್ದರಿಂದ ಸಚಿವ ಕುಮಾರಸ್ವಾಮಿಯವರು ಈ ಕಾರ್ಖಾನೆಯ ಪುನರಾರಂಭಕ್ಕೆ ಕ್ರಮ ಕೈಗೊಳ್ಳಬೇಕಿದೆ.
-ಸಂಜಯ್, ಪತ್ರಿಕೋದ್ಯಮ ವಿಭಾಗ, ಮಾನಸಗಂಗೋತ್ರಿ, ಮೈಸೂರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…