ಓದುಗರ ಪತ್ರ

ಓದುಗರ ಪತ್ರ| ಪುನರಾರಂಭಗೊಳ್ಳುವುದೇ ಭದ್ರಾವತಿ ಕಾರ್ಖಾನೆ?

ಸರ್ ಎಂ.ವಿಶ್ವೇಶ್ವರಯ್ಯನವರು ಆರಂಭಿಸಿದ ಕರ್ನಾಟಕದ ಮೊದಲ ಕಾರ್ಖಾನೆ ಎಂದೇ ಕರೆಯಲ್ಪಡುವ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನ ಮತ್ತು ಉಕ್ಕು ಕಾರ್ಖಾನೆ ಸ್ಥಗಿತವಾಗಿ ಸಾವಿರಾರು ಕಾರ್ಮಿಕರ ಕುಟುಂಬಗಳು ಬೀದಿಗೆ ಬೀಳುವಂತೆ ಮಾಡಿದೆ.

ಈ ಕಾರ್ಖಾನೆ ಸಾವಿರಾರು ಮಂದಿಗೆ ಉದ್ಯೋಗ ನೀಡಿತ್ತು. ಅನೇಕ ಕುಟುಂಬಗಳವರು ಈ ಕಾರ್ಖಾನೆಯ ಉದ್ಯೋಗವನ್ನೇ ಆಧರಿಸಿ ಜೀವನ ಸಾಗಿಸುತ್ತಿದ್ದರು. ಆದರೆ ಕಾರಣಾಂತರಗಳಿಂದ ಈ ಕಾರ್ಖಾನೆಯನ್ನು ಮುಚ್ಚಲಾಗಿದ್ದು, ಇಲ್ಲಿನ ನೌಕರರ ಬದುಕು ಬೀದಿಗೆ ಬರುವಂತೆ ಮಾಡಿದೆ. ಪ್ರಸ್ತುತ ಕರ್ನಾಟಕದವರೇ ಆದ ಎಚ್.ಡಿ.ಕುಮಾರಸ್ವಾಮಿಯವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿದ್ದು, ಈ ಕಾರ್ಖಾನೆಯ ಪುನರಾರಂಭಕ್ಕೆ ಕ್ರಮವಹಿಸಬಹುದು ಎಂಬ ವಿಶ್ವಾಸ ಇಲ್ಲಿನ ಸಿಬ್ಬಂದಿಯಲ್ಲಿ ಮೂಡಿದೆ. ಒಂದು ವೇಳೆ ಕಾರ್ಖಾನೆ ಪುನರಾರಂಭಗೊಂಡಲ್ಲಿ ಸ್ಥಳೀಯರಿಗೆ ಉದ್ಯೋಗ ದೊರಕುವುದಲ್ಲದೇ ಉಕ್ಕಿನ ನಗರಿ ಎಂದೇ ಖ್ಯಾತಿ ಪಡೆದಿರುವ ಭದ್ರಾವತಿಯಲ್ಲಿ ವಾಣಿಜ್ಯ ಚಟುವಟಿಕೆಗಳೂ ಚುರುಕುಗೊಂಡು ಜನರು ಆರ್ಥಿಕವಾಗಿ ಸಬಲರಾಗಲಿದ್ದಾರೆ. ಆದ್ದರಿಂದ ಸಚಿವ ಕುಮಾರಸ್ವಾಮಿಯವರು ಈ ಕಾರ್ಖಾನೆಯ ಪುನರಾರಂಭಕ್ಕೆ ಕ್ರಮ ಕೈಗೊಳ್ಳಬೇಕಿದೆ.

-ಸಂಜಯ್, ಪತ್ರಿಕೋದ್ಯಮ ವಿಭಾಗ, ಮಾನಸಗಂಗೋತ್ರಿ, ಮೈಸೂರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Share
Published by
ಚಂದು ಸಿಎನ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago