ಓದುಗರ ಪತ್ರ

ಓದುಗರ ಪತ್ರ | ಕನ್ನಡಕ್ಕೆ ಬೂಕರ್‌ ತಂದ ಬಾನು ಮುಷ್ತಾಕ್‌

ಕನ್ನಡ ಭಾಷೆಗೆ ಇದೇ ಮೊದಲ ಬಾರಿಗೆ ಬೂಕರ್ ಪ್ರಶಸ್ತಿ ಸಂದಿದೆ. 2025 ನೇ ಸಾಲಿನ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ನಮ್ಮ ಕನ್ನಡದ ಲೇಖಕಿ ಹಾಸನದ ಬಾನು ಮುಸ್ತಾಕ್ ಭಾಜನರಾಗಿದ್ದು, ಕನ್ನಡ ಭಾಷೆಗೆ ಮತ್ತು ಕರ್ನಾಟಕ ಗೌರವ ತಂದುಕೊಟ್ಟಿದ್ದಾರೆ, ಬಾನು ಮುಷ್ತಕ್ ಅವರ ಸಣ್ಣ ಕತೆಗಳ ಅನುವಾದ ಸಂಕಲನ ‘ಹಾರ್ಟ್ ಲ್ಯಾಪ್’ಗೆ ಪ್ರಶಸ್ತಿ ಸ೦ದಿದೆ.

ಬಾನು ಮುಷ್ತಾಕ್ ಅವರು ತಮ್ಮ ಬದುಕಿನಲ್ಲಿ, ಅನುಭವಿಸಿರುವ ನೋವುಗಳನ್ನು ಅನಾವರಣಗೊಳಿಸುವ ಈ ‘ಸಣ್ಣ ಕತೆಗಳ ಸಂಕಲನ’ ಇಂದು ಅಂತಾರಾಷ್ಟ್ರೀಯ ಮಟ್ಟದ ಬೂಕ‌ ಪ್ರಶಸ್ತಿಗೆ ಭಾಜನವಾಗಿದೆ.

80 ರ ದಶಕದಲ್ಲಿ, ಪತ್ರಿಕೋದ್ಯಮದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನೇ ತಂದ ಪಿ.ಲಂಕೇಶ್ ಅವರ ‘ಲಂಕೇಶ್ ಪತ್ರಿಕೆಯಲ್ಲಿ, ದಿಟ್ಟ ವರದಿಗಾರ್ತಿಯಾಗಿ, ಹಾಗೂ ಲೇಖಕಿಯಾಗಿ ಬಾನು ಮುಷ್ತಕ್ ಪರಿಚಿತಗೊಂಡರು. 80ರ ದಶಕದಲ್ಲೇ ಅವರ ಸಣ್ಣ ಕತೆಗಳು ಲಂಕೇಶ್ ಪತ್ರಿಕೆಯಲ್ಲಿ ಪ್ರಕಟವಾಗಿದೆ.‌

ಸಣ್ಣ ಕತಗಳಿಗೂ, ಅಂತಾರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ಲಭಿಸುತ್ತದೆ ಎಂಬುದನ್ನು ಬಾನು ಮುಷ್ತಾಕ್ ಸಾದರಪಡಿಸಿದ್ದಾರೆ. ಇವರಿಗೆ ಕನ್ನಡಿಗರೆಲ್ಲರ ಪರವಾಗಿ ಅಭಿನಂದನೆಗಳು,
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

2 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

6 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

6 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

6 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

7 hours ago