ಕಾಶ್ಮೀರದ ದಕ್ಷಿಣ ಭಾಗದಲ್ಲಿರುವ ಅನಂತ ನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿರುವುದು ಅಮಾನವೀಯ ಇದು ಅತ್ಯಂತ ಹೇಯ ಪ್ರಕರಣವಾಗಿದ್ದು, ದಾಳಿ ವೇಳೆ ಪ್ರವಾಸಿಗರನ್ನು ರಕ್ಷಣೆ ಮಾಡಲು ತನ್ನ ಪ್ರಾಣವನ್ನು ಲೆಕ್ಕಿಸದೆ ಹೋರಾಡಿ ಹುತಾತ್ಮರಾದ ವ್ಯಕ್ತಿಯ ಬಗ್ಗೆಯೂ ಈ ನಾಡು ಮಾತನಾಡಬೇಕಿದೆ.
ಆತನ ಹೆಸರು ಸೈಯದ್ ಆದಿಲ್ ಹುಸೇನ್ ಶಾ. ಭಯೋತ್ಪಾದಕರಿಗೆ ಪ್ರತಿರೋಧ ತೋರಿಸಿದ್ದರಿಂದ ಪ್ರಾಣ ಕಳೆದುಕೊಂಡಿದ್ದಾರೆ. ತನಗೆ ಸಂಬಂಧವೇ ಇಲ್ಲದ, ಕೇವಲ ಪ್ರವಾಸಕ್ಕಾಗಿ ಬಂದಿದ್ದವರನ್ನು ಕುದುರೆಯ ಮೇಲೆ ಕೂರಿಸಿಕೊಂಡು ಹೋಗುತ್ತಿದ್ದ ಶಾ, ಭಯೋತ್ಪಾದಕರು ದಾಳಿ ಮಾಡುತ್ತಿದ್ದಂತೆ ಅಲ್ಲಿಂದ ಕಾಲುಕೀಳಬಹುದಿತ್ತು. ಅಥವಾ ಸುಮ್ಮನೇ ಇದ್ದರೂ ಉಗ್ರರು ಆತನನ್ನು ಕೊಲ್ಲುತ್ತಲೂ ಇರಲಿಲ್ಲ.
ಆದರೆ ಆತ, ಪ್ರವಾಸಿಗರನ್ನು ಕರೆದೊಯ್ಯುವುದು ಮಾತ್ರವಲ್ಲ, ಅವರ ರಕ್ಷಣೆ ಕೂಡ ತನ್ನ ಹೊಣೆ ಎಂದು ಭಾವಿಸಿದ್ದರು. ಹಾಗಾಗಿಯೇ ಗುಂಡು ಹಾರಿಸುತ್ತಿದ್ದ ಭಯೋತ್ಪಾದಕನಿಂದ ರೈಫಲ್ನ್ನು ಕಿತ್ತುಕೊಳ್ಳಲು ಪ್ರಯತ್ನಿಸಿ, ಜೀವ ತ್ಯಾಗ ಮಾಡಿದ್ದಾರೆ. ಈ ಸಂದರ್ಭದಲ್ಲಿ ಹಲವು ಪ್ರವಾಸಿಗರು ಓಡಿಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ. ಶಾ ಅವರ ಧೈರ್ಯ, ಕರ್ತವ್ಯಪ್ರಜ್ಞೆ ಇಡೀ ದೇಶಕ್ಕೇ ಮಾದರಿಯಾಗಿದೆ.
-ಜಿ. ಶಿವರಾಜು, ಗಾಂಧಿನಗರ, ಮೈಸೂರು.
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…
ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…