ಓದುಗರ ಪತ್ರ

ಓದುಗರ ಪತ್ರ | ಭಯೋತ್ಪಾದಕರನ್ನು ಎದುರಿಸಿದ ಧೀರ ಹುಸೇನ್ ಶಾ

ಕಾಶ್ಮೀರದ ದಕ್ಷಿಣ ಭಾಗದಲ್ಲಿರುವ ಅನಂತ ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿರುವುದು ಅಮಾನವೀಯ ಇದು ಅತ್ಯಂತ ಹೇಯ ಪ್ರಕರಣವಾಗಿದ್ದು, ದಾಳಿ ವೇಳೆ ಪ್ರವಾಸಿಗರನ್ನು ರಕ್ಷಣೆ ಮಾಡಲು ತನ್ನ ಪ್ರಾಣವನ್ನು ಲೆಕ್ಕಿಸದೆ ಹೋರಾಡಿ ಹುತಾತ್ಮರಾದ ವ್ಯಕ್ತಿಯ ಬಗ್ಗೆಯೂ ಈ ನಾಡು ಮಾತನಾಡಬೇಕಿದೆ.

ಆತನ ಹೆಸರು ಸೈಯದ್ ಆದಿಲ್ ಹುಸೇನ್ ಶಾ. ಭಯೋತ್ಪಾದಕರಿಗೆ ಪ್ರತಿರೋಧ ತೋರಿಸಿದ್ದರಿಂದ ಪ್ರಾಣ ಕಳೆದುಕೊಂಡಿದ್ದಾರೆ. ತನಗೆ ಸಂಬಂಧವೇ ಇಲ್ಲದ, ಕೇವಲ ಪ್ರವಾಸಕ್ಕಾಗಿ ಬಂದಿದ್ದವರನ್ನು ಕುದುರೆಯ ಮೇಲೆ ಕೂರಿಸಿಕೊಂಡು ಹೋಗುತ್ತಿದ್ದ ಶಾ, ಭಯೋತ್ಪಾದಕರು ದಾಳಿ ಮಾಡುತ್ತಿದ್ದಂತೆ ಅಲ್ಲಿಂದ ಕಾಲುಕೀಳಬಹುದಿತ್ತು. ಅಥವಾ ಸುಮ್ಮನೇ ಇದ್ದರೂ ಉಗ್ರರು ಆತನನ್ನು ಕೊಲ್ಲುತ್ತಲೂ ಇರಲಿಲ್ಲ.

ಆದರೆ ಆತ, ಪ್ರವಾಸಿಗರನ್ನು ಕರೆದೊಯ್ಯುವುದು ಮಾತ್ರವಲ್ಲ, ಅವರ ರಕ್ಷಣೆ ಕೂಡ ತನ್ನ ಹೊಣೆ ಎಂದು ಭಾವಿಸಿದ್ದರು. ಹಾಗಾಗಿಯೇ ಗುಂಡು ಹಾರಿಸುತ್ತಿದ್ದ ಭಯೋತ್ಪಾದಕನಿಂದ ರೈಫಲ್‌ನ್ನು ಕಿತ್ತುಕೊಳ್ಳಲು ಪ್ರಯತ್ನಿಸಿ, ಜೀವ ತ್ಯಾಗ ಮಾಡಿದ್ದಾರೆ. ಈ ಸಂದರ್ಭದಲ್ಲಿ ಹಲವು ಪ್ರವಾಸಿಗರು ಓಡಿಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ. ಶಾ ಅವರ ಧೈರ್ಯ, ಕರ್ತವ್ಯಪ್ರಜ್ಞೆ ಇಡೀ ದೇಶಕ್ಕೇ ಮಾದರಿಯಾಗಿದೆ.

-ಜಿ. ಶಿವರಾಜು, ಗಾಂಧಿನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

4 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

7 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

7 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

7 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

8 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

10 hours ago