ಕಾಶ್ಮೀರದ ದಕ್ಷಿಣ ಭಾಗದಲ್ಲಿರುವ ಅನಂತ ನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿರುವುದು ಅಮಾನವೀಯ ಇದು ಅತ್ಯಂತ ಹೇಯ ಪ್ರಕರಣವಾಗಿದ್ದು, ದಾಳಿ ವೇಳೆ ಪ್ರವಾಸಿಗರನ್ನು ರಕ್ಷಣೆ ಮಾಡಲು ತನ್ನ ಪ್ರಾಣವನ್ನು ಲೆಕ್ಕಿಸದೆ ಹೋರಾಡಿ ಹುತಾತ್ಮರಾದ ವ್ಯಕ್ತಿಯ ಬಗ್ಗೆಯೂ ಈ ನಾಡು ಮಾತನಾಡಬೇಕಿದೆ.
ಆತನ ಹೆಸರು ಸೈಯದ್ ಆದಿಲ್ ಹುಸೇನ್ ಶಾ. ಭಯೋತ್ಪಾದಕರಿಗೆ ಪ್ರತಿರೋಧ ತೋರಿಸಿದ್ದರಿಂದ ಪ್ರಾಣ ಕಳೆದುಕೊಂಡಿದ್ದಾರೆ. ತನಗೆ ಸಂಬಂಧವೇ ಇಲ್ಲದ, ಕೇವಲ ಪ್ರವಾಸಕ್ಕಾಗಿ ಬಂದಿದ್ದವರನ್ನು ಕುದುರೆಯ ಮೇಲೆ ಕೂರಿಸಿಕೊಂಡು ಹೋಗುತ್ತಿದ್ದ ಶಾ, ಭಯೋತ್ಪಾದಕರು ದಾಳಿ ಮಾಡುತ್ತಿದ್ದಂತೆ ಅಲ್ಲಿಂದ ಕಾಲುಕೀಳಬಹುದಿತ್ತು. ಅಥವಾ ಸುಮ್ಮನೇ ಇದ್ದರೂ ಉಗ್ರರು ಆತನನ್ನು ಕೊಲ್ಲುತ್ತಲೂ ಇರಲಿಲ್ಲ.
ಆದರೆ ಆತ, ಪ್ರವಾಸಿಗರನ್ನು ಕರೆದೊಯ್ಯುವುದು ಮಾತ್ರವಲ್ಲ, ಅವರ ರಕ್ಷಣೆ ಕೂಡ ತನ್ನ ಹೊಣೆ ಎಂದು ಭಾವಿಸಿದ್ದರು. ಹಾಗಾಗಿಯೇ ಗುಂಡು ಹಾರಿಸುತ್ತಿದ್ದ ಭಯೋತ್ಪಾದಕನಿಂದ ರೈಫಲ್ನ್ನು ಕಿತ್ತುಕೊಳ್ಳಲು ಪ್ರಯತ್ನಿಸಿ, ಜೀವ ತ್ಯಾಗ ಮಾಡಿದ್ದಾರೆ. ಈ ಸಂದರ್ಭದಲ್ಲಿ ಹಲವು ಪ್ರವಾಸಿಗರು ಓಡಿಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ. ಶಾ ಅವರ ಧೈರ್ಯ, ಕರ್ತವ್ಯಪ್ರಜ್ಞೆ ಇಡೀ ದೇಶಕ್ಕೇ ಮಾದರಿಯಾಗಿದೆ.
-ಜಿ. ಶಿವರಾಜು, ಗಾಂಧಿನಗರ, ಮೈಸೂರು.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…