ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ ಮಧ್ಯೆ ಭಾಗದಲ್ಲಿ ಎಲ್ಲೂ ಬಸ್ ತಂಗುದಾಣ ನಿರ್ಮಿಸಿಲ್ಲ. ಈ ಮುಖ್ಯ ರಸ್ತೆಯ ‘ಅಮ್ಮ ಕಾಂಪ್ಲೆಕ್ಸ್’ (ಮಾ ಲ್ಯಾಬ್), ಮುಂಭಾಗದ ರಸ್ತೆಯಲ್ಲೇ ಬಿಸಿಲು ಮಳೆ ಗಾಳಿ ಚಳಿ ಎನದೇ, ಮರದ ಕೆಳಗೆ ನಗರ ಸಾರಿಗೆ ಬಸ್ಸಿಗಾಗಿ ಹಿರಿಯ ನಾಗರಿಕರು, ಮಹಿಳೆಯರು ಮತ್ತು ಮಕ್ಕಳು ಕಾಯುತ್ತಿರುತ್ತಾರೆ. ಇದು ಜನನಿಬಿಡ ಪ್ರದೇಶವಾಗಿರುವುದರಿಂದ ನೂರಾರು ಪ್ರಯಾಣಿಕರು ಇಲ್ಲಿಂದಲೇ ವಿವಿಧೆಡೆಗಳಿಗೆ ಪ್ರಯಾಣಿಸುತ್ತಾರೆ. ಈ ಮುಖ್ಯ ರಸ್ತೆಯ ಅಮ್ ಕಾಂಪ್ಲೆಕ್ಸ್ ಬಳಿ ಸಾಕಷ್ಟು ಜಾಗವೂ ಇರುವುದರಿಂದ ಇಲ್ಲಿ ಬಸ್ ನಿಲ್ದಾಣವನ್ನು ನಿರ್ಮಿಸಿ, ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು. ಈ ಬಗ್ಗೆ ನಗರ ಪಾಲಿಕೆಯ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…
ಕೆ.ಬಿ.ರಮೇಶನಾಯಕ ರವಿಚಂದ್ರನ್, ಶಿವರಾಜ್ಕುಮಾರ್, ಯಶ್, ರಿಷಭ್ ಶೆಟ್ಟಿ, ರಚಿತಾ ರಾಮ್, ಸಪ್ತಮಿ ಗೌಡ ಸೇರಿ ೩೦ ಕಲಾವಿದರು ಭಾಗಿ ಮೈಸೂರು:…