ಮೈಸೂರಿನ ಕುವೆಂಪುನಗರದ ಅಕ್ಷಯ ಭಂಡಾರ್ ಸಮೀಪದ ಬಸ್ ತಂಗುದಾಣಕ್ಕೆ ಶೆಲ್ಟರ್ ಇಲ್ಲದೆ ಪ್ರಯಾಣಿಕರು ಬಿಸಿಲು, ಮಳೆ ಎನ್ನದೆ ರಸ್ತೆ ಬದಿಯಲ್ಲಿಯೇ ನಿಂತು ಬಸ್ಗಾಗಿ ಕಾಯಬೇಕಿದೆ.
ಅಕ್ಷಯ ಭಂಡಾರ್ ಕಡೆಯಿಂದ ಕಾಮಾಕ್ಷಿ ಆಸ್ಪತ್ರೆ, ಶಾರದಾದೇವಿ ನಗರ, ಬೋಗಾದಿ ೨ನೇ ಹಂತ, ಕುವೆಂಪು ನಗರ ಬಸ್ ಡಿಪೊ, ವಿವೇಕಾನಂದ ನಗರ, ಶ್ರೀರಾಮಂಪುರ, ಆಂದೋಲನ ಸರ್ಕಲ್, ದಟ್ಟಗಳ್ಳಿ ಮಾರ್ಗವಾಗಿ ಬಸ್ಗಳು ಸಂಚರಿಸುತ್ತವೆ. ಜತೆಗೆ ಅಕ್ಷಯ ಭಂಡಾರ್ಯಿಂದ ಮೈಸೂರು ನಗರ ಬಸ್ ನಿಲ್ದಾಣಕ್ಕೂ ಬಸ್ಗಳು ಸಂಚರಿಸುತ್ತವೆ. ಹೀಗಾಗಿ ನೂರಾರು ಪ್ರಯಾಣಿಕರು ಇದೇ ಬಸ್ ನಿಲ್ದಾಣದ ಮೂಲಕ ನಗರದ ವಿವಿಧ ಭಾಗಗಳಿಗೆ ಸಂಚರಿಸುತ್ತಾರೆ. ಆದರೆ ಇಲ್ಲಿನ ಬಸ್ ನಿಲ್ದಾಣಕ್ಕೆ ಶೆಲ್ಟರ್ ಇಲ್ಲದ ಪರಿಣಾಮ ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮಳೆ, ಬಿಸಿಲಿನಲ್ಲಿ ನಿಂತು ಬಸ್ಗಾಗಿ ಕಾಯುವಂತಾಗಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಈ ನಿಲ್ದಾಣಕ್ಕೆ ಶೆಲ್ಟರ್ ನಿರ್ಮಿಸಬೇಕಿದೆ.
-ಎನ್. ಹರೀಶ, ಟಿ. ಕೆ. ಬಡಾವಣೆ, ಮೈಸೂರು.
ಮೈಸೂರು : ಯುಪಿಎಸ್ಸಿ ಮತ್ತು ಕೆಪಿಎಸ್ಸಿ ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಸವಾಲು. ಇದೊಂದು ಸುದೀರ್ಘ ಪಯಣ. ಹೀಗಾಗಿ ಒಂದೇ…
ಹೊಸದಿಲ್ಲಿ : ಕೃತಕ ಬುದ್ಧಿಮತ್ತೆಗೆ ಗುಲಾಮರಾಗಬೇಡಿ ಬದಲಿಗೆ ಅದನ್ನು ಸಾಮರ್ಥ್ಯವೃದ್ಧಿಗೆ ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿ…
ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.…
ಹುಬ್ಬಳ್ಳಿ: ಖ್ಯಾತ ಗಾಯಕ ಸೋನು ನಿಗಮ್ ಅವರಿಂದು ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಮಾಟಳ್ಳಿ ಗ್ರಾಮ ಪಂಚಾಯಿತಿ…
ಟೊರೆಂಟೊ: ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಮೂಲದ ವ್ಯಕ್ತಿಯೊಬ್ಬನನ್ನು ಹತ್ಯೆಗೈದಿರುವ ಘಟನೆ ಕೆನಡಾದಲ್ಲಿ ನಡೆದಿದೆ. ಚಂದನ್ಕುಮಾರ್(37) ಹತ್ಯೆಯಾದ ವ್ಯಕ್ತಿ. ಕಳೆದ ಆರು…