ಮೈಸೂರಿನ ಕುವೆಂಪುನಗರದ ಅಕ್ಷಯ ಭಂಡಾರ್ ಸಮೀಪದ ಬಸ್ ತಂಗುದಾಣಕ್ಕೆ ಶೆಲ್ಟರ್ ಇಲ್ಲದೆ ಪ್ರಯಾಣಿಕರು ಬಿಸಿಲು, ಮಳೆ ಎನ್ನದೆ ರಸ್ತೆ ಬದಿಯಲ್ಲಿಯೇ ನಿಂತು ಬಸ್ಗಾಗಿ ಕಾಯಬೇಕಿದೆ.
ಅಕ್ಷಯ ಭಂಡಾರ್ ಕಡೆಯಿಂದ ಕಾಮಾಕ್ಷಿ ಆಸ್ಪತ್ರೆ, ಶಾರದಾದೇವಿ ನಗರ, ಬೋಗಾದಿ ೨ನೇ ಹಂತ, ಕುವೆಂಪು ನಗರ ಬಸ್ ಡಿಪೊ, ವಿವೇಕಾನಂದ ನಗರ, ಶ್ರೀರಾಮಂಪುರ, ಆಂದೋಲನ ಸರ್ಕಲ್, ದಟ್ಟಗಳ್ಳಿ ಮಾರ್ಗವಾಗಿ ಬಸ್ಗಳು ಸಂಚರಿಸುತ್ತವೆ. ಜತೆಗೆ ಅಕ್ಷಯ ಭಂಡಾರ್ಯಿಂದ ಮೈಸೂರು ನಗರ ಬಸ್ ನಿಲ್ದಾಣಕ್ಕೂ ಬಸ್ಗಳು ಸಂಚರಿಸುತ್ತವೆ. ಹೀಗಾಗಿ ನೂರಾರು ಪ್ರಯಾಣಿಕರು ಇದೇ ಬಸ್ ನಿಲ್ದಾಣದ ಮೂಲಕ ನಗರದ ವಿವಿಧ ಭಾಗಗಳಿಗೆ ಸಂಚರಿಸುತ್ತಾರೆ. ಆದರೆ ಇಲ್ಲಿನ ಬಸ್ ನಿಲ್ದಾಣಕ್ಕೆ ಶೆಲ್ಟರ್ ಇಲ್ಲದ ಪರಿಣಾಮ ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮಳೆ, ಬಿಸಿಲಿನಲ್ಲಿ ನಿಂತು ಬಸ್ಗಾಗಿ ಕಾಯುವಂತಾಗಿದೆ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ಈ ನಿಲ್ದಾಣಕ್ಕೆ ಶೆಲ್ಟರ್ ನಿರ್ಮಿಸಬೇಕಿದೆ.
-ಎನ್. ಹರೀಶ, ಟಿ. ಕೆ. ಬಡಾವಣೆ, ಮೈಸೂರು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…