ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳ ಓಡಾಡಲು ಪರದಾಡುವಂತಾಗಿದೆ.
ಅಂತರಸಂತೆ ಗ್ರಾಮದ ತಾರಕ ಸರ್ಕಲ್ ಬಳಿ ರಸ್ತೆಯ ಒಂದು ಬದಿಯಲ್ಲಿ ಚರಂಡಿ ಇಲ್ಲದೆ ಬಿದಂತಹ ಮಳೆನೀರು ಸಂಪೂರ್ಣವಾಗಿ ರಸ್ತೆಯಲ್ಲಿಯೇ ಹರಿಯುತ್ತಿದೆ. ಈ ಭಾಗದಲ್ಲಿ ಚರಂಡಿಗಳಿಂದ ಹರಿದು ಬರುವ ಮಳೆ ನೀರು
ನೇರವಾಗಿ ಕೆರೆ ಸೇರುವಂತೆ ಎರಡೂ ಬದಿಗಳಲ್ಲೂ ಚರಂಡಿ ನಿರ್ಮಿಸಲಾಗಿತ್ತು. ಆದರೆ, ಒಂದು ಬದಿಯ ಚರಂಡಿ ಸಂಪೂರ್ಣ ಮುಚ್ಚಿಹೋಗಿದ್ದು, ಚರಂಡಿ ನೀರೆಲ್ಲಾ ರಸ್ತೆಯಲ್ಲಿಯೇ ಹರಿಯುತ್ತಿದೆ. ಇದರಿಂದಾಗಿ ಈ ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ. ಅಲ್ಲದೆ ನೀರು ಹೊತ್ತುತಂದ ಕಸ, ಕಡ್ಡಿ, ಮಣ್ಣೆಲ್ಲ ರಸ್ತೆಯನ್ನು ಆವರಿಸುತ್ತಿದೆ. ಈ ಭಾಗದಲ್ಲಿ ಚರಂಡಿಯನ್ನು ನಿರ್ಮಿಸಬೇಕು ಎಂದು ಸಾಕಷ್ಟು ಬಾರಿ ಗ್ರಾಮ ಪಂಚಾಯಿತಿಯವರಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಈ ಭಾಗದಲ್ಲಿ ಚರಂಡಿ ನಿರ್ಮಿಸಬೇಕಿದೆ.
-ಗುಣಪಾಲ್, ಅಂತರಸಂತೆ, ಎಚ್.ಡಿ.ಕೋಟೆ ತಾ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…