ಓದುಗರ ಪತ್ರ

ಓದುಗರ ಪತ್ರ| ಒಳಚರಂಡಿ ನಿರ್ಮಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳ ಓಡಾಡಲು ಪರದಾಡುವಂತಾಗಿದೆ.

ಅಂತರಸಂತೆ ಗ್ರಾಮದ ತಾರಕ ಸರ್ಕಲ್ ಬಳಿ ರಸ್ತೆಯ ಒಂದು ಬದಿಯಲ್ಲಿ ಚರಂಡಿ ಇಲ್ಲದೆ ಬಿದಂತಹ ಮಳೆನೀರು ಸಂಪೂರ್ಣವಾಗಿ ರಸ್ತೆಯಲ್ಲಿಯೇ ಹರಿಯುತ್ತಿದೆ. ಈ ಭಾಗದಲ್ಲಿ ಚರಂಡಿಗಳಿಂದ ಹರಿದು ಬರುವ ಮಳೆ ನೀರು
ನೇರವಾಗಿ ಕೆರೆ ಸೇರುವಂತೆ ಎರಡೂ ಬದಿಗಳಲ್ಲೂ ಚರಂಡಿ ನಿರ್ಮಿಸಲಾಗಿತ್ತು. ಆದರೆ, ಒಂದು ಬದಿಯ ಚರಂಡಿ ಸಂಪೂರ್ಣ ಮುಚ್ಚಿಹೋಗಿದ್ದು, ಚರಂಡಿ ನೀರೆಲ್ಲಾ ರಸ್ತೆಯಲ್ಲಿಯೇ ಹರಿಯುತ್ತಿದೆ. ಇದರಿಂದಾಗಿ ಈ ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ. ಅಲ್ಲದೆ ನೀರು ಹೊತ್ತುತಂದ ಕಸ, ಕಡ್ಡಿ, ಮಣ್ಣೆಲ್ಲ ರಸ್ತೆಯನ್ನು ಆವರಿಸುತ್ತಿದೆ. ಈ ಭಾಗದಲ್ಲಿ ಚರಂಡಿಯನ್ನು ನಿರ್ಮಿಸಬೇಕು ಎಂದು ಸಾಕಷ್ಟು ಬಾರಿ ಗ್ರಾಮ ಪಂಚಾಯಿತಿಯವರಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಈ ಭಾಗದಲ್ಲಿ ಚರಂಡಿ ನಿರ್ಮಿಸಬೇಕಿದೆ.

-ಗುಣಪಾಲ್, ಅಂತರಸಂತೆ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

12 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

13 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

20 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

20 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

1 day ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

1 day ago