Mysore
23
clear sky

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಓದುಗರ ಪತ್ರ | ಮದ್ಯಪ್ರಿಯರ ತಾಣವಾಗಿರುವ ಬಸ್ ತಂಗುದಾಣ

ಚಾಮರಾಜನಗರ ತಾಲ್ಲೂಕಿನ ಮುಕ್ಕಡಹಳ್ಳಿಯ ಬಸ್ ತಂಗುದಾಣವು ರಾತ್ರಿಯ ವೇಳೆಯಲ್ಲಿ ಮದ್ಯಪಾನದಂತಹ ಅನೈತಿಕ ಚಟುವಟಿಕೆಗೆ ವೇದಿಕೆಯಾಗಿದೆ. ಕುಡಿದು ಬಾಟಲಿಗಳು, ಮದ್ಯದ ಪೌಚ್‌ಗಳು, ಬೀಡಿ, ಸಿಗರೇಟು ತುಂಡನ್ನು ಅಲ್ಲಲ್ಲೇ ಬಿಸಾಡುವುದರಿಂದ ಪ್ರತಿದಿನ ಬೆಳಿಗ್ಗೆ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು, ಮಹಿಳೆಯರು, ಹಿರಿಯ ನಾಗರಿಕರು ಬಸ್ ತಂಗುದಾಣದಲ್ಲಿ ಕುಳಿತುಕೊಳ್ಳಲೂ ಮುಜುಗರ ಪಡುವಂತಾಗಿದೆ. ಸಂಜೆ ವೇಳೆ ಬಸ್‌ ತಂಗುದಾಣದ ಸುತ್ತಮುತ್ತ ಪೊಲೀಸರು ಗಸ್ತು ತಿರುಗುವ ಮೂಲಕ ಮದ್ಯ ವ್ಯಸನಿಗಳ ಹಾವಳಿಗೆ ಕಡಿವಾಣ ಹಾಕಬೇಕಾಗಿದೆ.

ಎಂ.ಪಿ.ದರ್ಶನ್ ಚಂದ್ರ, ಮುಕ್ತಡಹಳ್ಳಿ, ಚಾಮರಾಜನಗರ ತಾ.

Tags:
error: Content is protected !!