ಓದುಗರ ಪತ್ರ

ಓದುಗರ ಪತ್ರ: ಭಿಕ್ಷುಕರ ತಾಣವಾಗುತ್ತಿರುವ ಬಸ್ ತಂಗುದಾಣ

ಮೈಸೂರಿನ ಶಾಂತಲಾ ಚಿತ್ರಮಂದಿರದ ಸಿಗ್ನಲ್ ಬಳಿಯಿರುವ ಬಸ್ ತಂಗುದಾಣವನ್ನು ಭಿಕ್ಷುಕರು ಅತಿಕ್ರಮಿಸಿಕೊಂಡಿದ್ದು ಗಂಟು ಮೂಟೆಗಳನ್ನು ಇಟ್ಟುಕೊಂಡು ಹಗಲಿನ ವೇಳೆಯಲ್ಲೇ ತಂಗುದಾಣದೊಳಗೆ ನಿದ್ರಿಸುತ್ತಿರುತ್ತಾರೆ.

ಇದನ್ನೂ ಓದಿ: ದೇಶದ ಭವಿಷ್ಯ ನಿರೂಪಿಸುವ ಹೊಣೆ ಶಿಕ್ಷಕರದ್ದು : ಶಾಸಕ ಜಿಟಿಡಿ

ಬಸ್ ತಂಗುದಾಣ ಗಬ್ಬು ನಾರುತ್ತಿದ್ದು, ಬಸ್‌ಗಾಗಿ ಕಾಯುವವರು ಇಲ್ಲಿ ಮೂಗು ಮುಚ್ಚಿಕೊಂಡೇ ಇರುವುದು ಅನಿವಾರ್ಯವಾಗಿದೆ. ಬಸ್ ತಂಗುದಾಣದ ಪಕ್ಕ ಇರುವ ಫುಟ್‌ಪಾತ್ ಮೇಲೆ ಮಾಂಸಾಹಾರಿ ಫಾಸ್ಟ್ ಫುಡ್ ಗಾಡಿಗಳಿದ್ದು, ಗ್ರಾಹಕರು ರಸ್ತೆ ಬದಿಯಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ನಗರ ಸಾರಿಗೆ ಬಸ್‌ಗಳಿಗಾಗಿ ಕಾಯುವವರಿಗೆ ಸ್ಥಳವೇ ಇಲ್ಲದಂತಾಗಿದೆ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಬಸ್ ತಂಗುದಾಣದಲ್ಲಿ ಠಿಕಾಣಿ ಹೂಡಿರುವ ಭಿಕ್ಷುಕರನ್ನು ಕೂಡಲೇ ಭಿಕ್ಷುಕರ ಪುನರ್ವಸತಿ ಕೇಂದ್ರಗಳಿಗೆ ಕಳುಹಿಸಬೇಕು ಹಾಗೂ ಬಸ್ ತಂಗುದಾಣವನ್ನು ಸ್ವಚ್ಛವಾಗಿಡಬೇಕು. ಫುಟ್ ಪಾತ್ ಅತಿಕ್ರಮಿಸಿಕೊಂಡಿರುವ ಫಾಸ್ಟ್ ಫುಡ್‌ಗಾಡಿಗಳನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

 -ಎನ್. ಕುಮಾರಸ್ವಾಮಿ, ಚಾಮರಾಜ ಮೊಹಲ್ಲಾ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

8 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

17 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago