ಓದುಗರ ಪತ್ರ

ಓದುಗರ ಪತ್ರ | ವಿಧವಾ ಪಿಂಚಣಿ ಮೊತ್ತ ಹೆಚ್ಚಿಸಿ

ರಾಜ್ಯದಲ್ಲಿ ವಿಧವಾ ಪಿಂಚಣಿ ಫಲಾನುಭವಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಆದರೆ ರಾಜ್ಯ ಸರ್ಕಾರ ಪಿಂಚಣಿ ಮೊತ್ತವನ್ನು ಮಾತ್ರ ಏರಿಕೆ ಮಾಡಿಲ್ಲ. ವಿಧವಾ ವೇತನವಾಗಿ ಸರ್ಕಾರ ಮಾಸಿಕ ೮೦೦ ರೂ. ಮಾತ್ರ ನೀಡುತ್ತಿದೆ. ಇದು ಅಲ್ಪ ಮೊತ್ತವಾಗಿದೆ. ಇದರಲ್ಲಿ ಕುಟುಂಬ ನಿರ್ವಹಣೆ ಕಷ್ಟಸಾಧ್ಯವಾಗಿದೆ. ಮೂರು ಹೊತ್ತು ಹೊಟ್ಟೆತುಂಬ ಊಟ, ಮೈತುಂಬಾ ಬಟ್ಟೆಗೆ ಅಗತ್ಯವಾದಷ್ಟು ಹಣವಾದರೂ ದೊರೆತರೆ ಈ ಪಿಂಚಣಿ ಫಲಾನುಭವಿಗಳ ಬದುಕಿಗೆ ಭದ್ರನೆಲೆ ದೊರೆತಂತೆ ಆಗುತ್ತದೆ. ಇವರಿಗೆ ಇತರೆ ಖರ್ಚುಗಳೂ ಇರುತ್ತವೆ ಎಂಬುದನ್ನು ಮರೆಯುವಂತಿಲ್ಲ.

ಅಲ್ಲದೆ, ಅಡುಗೆ ಸಾಮಾನುಗಳು, ದವಸ ಧಾನ್ಯಗಳು ಹಾಗೂ ತರಕಾರಿಗಳ ಬೆಲೆಗಳಲ್ಲಿ ಹೆಚ್ಚಳ ಆಗುತ್ತಲೇ ಇದೆ. ಹಾಗೆಯೇ ಮಕ್ಕಳ ವಿದ್ಯಾಭ್ಯಾಸದ ಖರ್ಚು ಕೂಡ ಇರುತ್ತದೆ. ಹೀಗಿರುವಾಗ ಸರ್ಕಾರ ಕೊಡುವ ಪಿಂಚಣಿ ಹಣದಿಂದ ಜೀವನ ಸಾಗಿಸುವುದು ಸಾಧ್ಯವೆ? ಆದ್ದರಿಂದ ಸರ್ಕಾರ ಕೂಡಲೆ ವಿಧವಾ ವೇತನವನ್ನು ಮಾಸಿಕ ೧,೫೦೦ ರೂ. ಗೆ ಹೆಚ್ಚಿಸಿದರೆ ಬಡ ಫಲಾನುಭವಿಗಳ ಬದುಕಿಗೆ ಅನುಕೂಲವಾಗುತ್ತದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಽಗಳು ಗಂಭೀರವಾಗಿ ಚಿಂತಿಸಿ, ಸೂಕ್ತ ಕ್ರಮಕೈಗೊಳ್ಳಬೇಕು.
-ಸಿದ್ದಲಿಂಗೆಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

10 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

10 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

11 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

12 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

12 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

13 hours ago