ಓದುಗರ ಪತ್ರ
ರಾಜ್ಯದಲ್ಲಿ ವಿಧವಾ ಪಿಂಚಣಿ ಫಲಾನುಭವಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಆದರೆ ರಾಜ್ಯ ಸರ್ಕಾರ ಪಿಂಚಣಿ ಮೊತ್ತವನ್ನು ಮಾತ್ರ ಏರಿಕೆ ಮಾಡಿಲ್ಲ. ವಿಧವಾ ವೇತನವಾಗಿ ಸರ್ಕಾರ ಮಾಸಿಕ ೮೦೦ ರೂ. ಮಾತ್ರ ನೀಡುತ್ತಿದೆ. ಇದು ಅಲ್ಪ ಮೊತ್ತವಾಗಿದೆ. ಇದರಲ್ಲಿ ಕುಟುಂಬ ನಿರ್ವಹಣೆ ಕಷ್ಟಸಾಧ್ಯವಾಗಿದೆ. ಮೂರು ಹೊತ್ತು ಹೊಟ್ಟೆತುಂಬ ಊಟ, ಮೈತುಂಬಾ ಬಟ್ಟೆಗೆ ಅಗತ್ಯವಾದಷ್ಟು ಹಣವಾದರೂ ದೊರೆತರೆ ಈ ಪಿಂಚಣಿ ಫಲಾನುಭವಿಗಳ ಬದುಕಿಗೆ ಭದ್ರನೆಲೆ ದೊರೆತಂತೆ ಆಗುತ್ತದೆ. ಇವರಿಗೆ ಇತರೆ ಖರ್ಚುಗಳೂ ಇರುತ್ತವೆ ಎಂಬುದನ್ನು ಮರೆಯುವಂತಿಲ್ಲ.
ಅಲ್ಲದೆ, ಅಡುಗೆ ಸಾಮಾನುಗಳು, ದವಸ ಧಾನ್ಯಗಳು ಹಾಗೂ ತರಕಾರಿಗಳ ಬೆಲೆಗಳಲ್ಲಿ ಹೆಚ್ಚಳ ಆಗುತ್ತಲೇ ಇದೆ. ಹಾಗೆಯೇ ಮಕ್ಕಳ ವಿದ್ಯಾಭ್ಯಾಸದ ಖರ್ಚು ಕೂಡ ಇರುತ್ತದೆ. ಹೀಗಿರುವಾಗ ಸರ್ಕಾರ ಕೊಡುವ ಪಿಂಚಣಿ ಹಣದಿಂದ ಜೀವನ ಸಾಗಿಸುವುದು ಸಾಧ್ಯವೆ? ಆದ್ದರಿಂದ ಸರ್ಕಾರ ಕೂಡಲೆ ವಿಧವಾ ವೇತನವನ್ನು ಮಾಸಿಕ ೧,೫೦೦ ರೂ. ಗೆ ಹೆಚ್ಚಿಸಿದರೆ ಬಡ ಫಲಾನುಭವಿಗಳ ಬದುಕಿಗೆ ಅನುಕೂಲವಾಗುತ್ತದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಽಗಳು ಗಂಭೀರವಾಗಿ ಚಿಂತಿಸಿ, ಸೂಕ್ತ ಕ್ರಮಕೈಗೊಳ್ಳಬೇಕು.
-ಸಿದ್ದಲಿಂಗೆಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…