ಓದುಗರ ಪತ್ರ
ಜಾತಿ ಗಣತಿ ವರದಿ ನೋಡಿದಾಗ ಇದು ಧರ್ಮ ಗಣತಿಯೋ, ಜಾತಿ ಗಣತಿಯೋ ಎನ್ನುವುದು ತಿಳಿಯುತ್ತಿಲ್ಲ. ಹಾಗಾಗಿ ಸ್ವ ಇಚ್ಛೆಯಿಂದ ಹೇಗೆ ಆಧಾರ್, ಪಾನ್ ಕಾರ್ಡ್, ರೇಷನ್ ಕಾರ್ಡ್ ಸೇರಿದಂತೆ ಇನ್ನಿತರ ಸರ್ಕಾರಿ ದಾಖಲೆಗಳನ್ನು ಪಡೆಯಲು ಆನ್ಲೈನ್ನಲ್ಲಿ ಅರ್ಜಿ ಹಾಕಲಾಗುತ್ತಿದೆಯೋ, ಅದೇ ರೀತಿ ಆಧಾರ್ ಕಾರ್ಡ್ ಮೂಲ ದಾಖಲೆಯನ್ನಾಗಿ ಅಪ್ಲೋಡ್ ಮಾಡಿ, ಜಾತಿ ಗಣತಿ ವಿವರವನ್ನು ಸ್ವ ಇಚ್ಛೆಯಿಂದ ಜನರಿಂದ ಅನ್ಲೈನ್ನಲ್ಲಿ ಅರ್ಜಿ ಹಾಕಿ ಸಲ್ಲಿಸುವಂತೆ ಪ್ರೇರೇಪಿಸಬೇಕು.
ಅನ್ಲೈನ್ ನಲ್ಲಿ ಹಾಕಿದ ಅರ್ಜಿಯನ್ನು ಪರಿಶೀಲಿಸಲು ಗ್ರಾಮ ಮಟ್ಟದ ಗ್ರಾ. ಪಂ. ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯ ಕರ್ತೆಯರು, ಗ್ರಾಮೀಣ ಅಂಗವಿಕಲರ ಪುನರ್ವಸತಿ ಕಾರ್ಯಕರ್ತರು ಸೇರಿದಂತೆ ಸ್ಥಳೀಯ ಆಡಳಿತ ಸಂಸ್ಥೆಗಳಿಂದ ಪರಿಶೀಲಿಸಿ, ಅಂಗೀಕರಿಸಬೇಕು.ನಗರ ಮಟ್ಟದಲ್ಲಿ ಸ್ಥಳೀಯ ಆಡಳಿತದಿಂದ ಪರಿಶೀಲಿಸಿ ಅಂಗೀಕರಿಸಬೇಕು.
ಇದರಿಂದ ಯಾವುದೇ ರೀತಿಯ ತೊಂದರೆ, ಅಡೆ ತಡೆ ಆಗುವುದಿಲ್ಲ. ಇಲ್ಲಿ ಜಾತಿ ಗಣತಿ ಎಂದಮೇಲೆ ಧರ್ಮ ಕಾಣಿಸಬಾರದು, ಪಂಥ ಅಥವಾ ಜಾತಿ ಎಂದು ನಮೂದಿಸಬೇಕು. ಧರ್ಮ ಹೇಗೆ ಜಾತಿ ಆಗುತ್ತದೆ? ಧರ್ಮವೇ ಬೇರೆ, ಜಾತಿಯೇ ಬೇರೆ. ಹಾಗಾಗಿ ಜನರು ಸ್ವ ಇಚ್ಛೆಯಿಂದ ಜಾತಿ ಗಣತಿ ವಿವರ ಅನ್ಲೈನಿನಲ್ಲಿ ಸಲ್ಲಿಸಿ, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಅಧಿಕಾರಿಗಳಿಂದ ಅಂಗೀಕರಿಸುವಂತಹ ವ್ಯವಸ್ಥೆ ಸರ್ಕಾರ ಮಾಡಬೇಕು. -ವೀರೇಶ ಧೂಪದಮಠ
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…