ಓದುಗರ ಪತ್ರ
ಜಾತಿ ಗಣತಿ ವರದಿ ನೋಡಿದಾಗ ಇದು ಧರ್ಮ ಗಣತಿಯೋ, ಜಾತಿ ಗಣತಿಯೋ ಎನ್ನುವುದು ತಿಳಿಯುತ್ತಿಲ್ಲ. ಹಾಗಾಗಿ ಸ್ವ ಇಚ್ಛೆಯಿಂದ ಹೇಗೆ ಆಧಾರ್, ಪಾನ್ ಕಾರ್ಡ್, ರೇಷನ್ ಕಾರ್ಡ್ ಸೇರಿದಂತೆ ಇನ್ನಿತರ ಸರ್ಕಾರಿ ದಾಖಲೆಗಳನ್ನು ಪಡೆಯಲು ಆನ್ಲೈನ್ನಲ್ಲಿ ಅರ್ಜಿ ಹಾಕಲಾಗುತ್ತಿದೆಯೋ, ಅದೇ ರೀತಿ ಆಧಾರ್ ಕಾರ್ಡ್ ಮೂಲ ದಾಖಲೆಯನ್ನಾಗಿ ಅಪ್ಲೋಡ್ ಮಾಡಿ, ಜಾತಿ ಗಣತಿ ವಿವರವನ್ನು ಸ್ವ ಇಚ್ಛೆಯಿಂದ ಜನರಿಂದ ಅನ್ಲೈನ್ನಲ್ಲಿ ಅರ್ಜಿ ಹಾಕಿ ಸಲ್ಲಿಸುವಂತೆ ಪ್ರೇರೇಪಿಸಬೇಕು.
ಅನ್ಲೈನ್ ನಲ್ಲಿ ಹಾಕಿದ ಅರ್ಜಿಯನ್ನು ಪರಿಶೀಲಿಸಲು ಗ್ರಾಮ ಮಟ್ಟದ ಗ್ರಾ. ಪಂ. ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯ ಕರ್ತೆಯರು, ಗ್ರಾಮೀಣ ಅಂಗವಿಕಲರ ಪುನರ್ವಸತಿ ಕಾರ್ಯಕರ್ತರು ಸೇರಿದಂತೆ ಸ್ಥಳೀಯ ಆಡಳಿತ ಸಂಸ್ಥೆಗಳಿಂದ ಪರಿಶೀಲಿಸಿ, ಅಂಗೀಕರಿಸಬೇಕು.ನಗರ ಮಟ್ಟದಲ್ಲಿ ಸ್ಥಳೀಯ ಆಡಳಿತದಿಂದ ಪರಿಶೀಲಿಸಿ ಅಂಗೀಕರಿಸಬೇಕು.
ಇದರಿಂದ ಯಾವುದೇ ರೀತಿಯ ತೊಂದರೆ, ಅಡೆ ತಡೆ ಆಗುವುದಿಲ್ಲ. ಇಲ್ಲಿ ಜಾತಿ ಗಣತಿ ಎಂದಮೇಲೆ ಧರ್ಮ ಕಾಣಿಸಬಾರದು, ಪಂಥ ಅಥವಾ ಜಾತಿ ಎಂದು ನಮೂದಿಸಬೇಕು. ಧರ್ಮ ಹೇಗೆ ಜಾತಿ ಆಗುತ್ತದೆ? ಧರ್ಮವೇ ಬೇರೆ, ಜಾತಿಯೇ ಬೇರೆ. ಹಾಗಾಗಿ ಜನರು ಸ್ವ ಇಚ್ಛೆಯಿಂದ ಜಾತಿ ಗಣತಿ ವಿವರ ಅನ್ಲೈನಿನಲ್ಲಿ ಸಲ್ಲಿಸಿ, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಅಧಿಕಾರಿಗಳಿಂದ ಅಂಗೀಕರಿಸುವಂತಹ ವ್ಯವಸ್ಥೆ ಸರ್ಕಾರ ಮಾಡಬೇಕು. -ವೀರೇಶ ಧೂಪದಮಠ
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…