ಓದುಗರ ಪತ್ರ
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಇತ್ತೀಚೆಗೆ ಮಂಡನೆ ಆಗಿರುವ ಸುಮಾರು ಹತ್ತು ವರ್ಷಗಳ ಹಿಂದೆ ನಡೆದಿದೆ ಎನ್ನಲಾದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಜಾತಿ ಜನಗಣತಿ ವರದಿ ಗೊಂದಲದ ಗೂಡಾಗಿದೆ.
ಶೇ. ೭೫ರಷ್ಟು ಜನರು ಈ ಸಮೀಕ್ಷೆಯೇ ನಡೆದಿಲ್ಲ ಎಂದು ಹೇಳುತ್ತಿದ್ದಾರೆ. ಉದಾಹರಣೆಗೆ ನಮ್ಮ ಬೀದಿಯಲ್ಲಾಗಲಿ, ನಮ್ಮ ಅಕ್ಕ- ಪಕ್ಕದ ಬಡಾವಣೆಯಲ್ಲಾಗಲಿ, ಈ ಜಾತಿ ಜನಗಣತಿ ನಡೆದಿಲ್ಲ, ಇದು ಯಾರನ್ನೋ ಮೆಚ್ಚಿಸಲು ಎ. ಸಿ. ರೂಂನಲ್ಲಿ ಕುಳಿತು ತಯಾರಿಸಿರುವ ವರದಿ ಎಂದು ಹೇಳಲಾಗುತ್ತಿದೆ.
ರಾಜ್ಯದಲ್ಲಿ ಈಗಾಗಲೇ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಈ ಜಾತಿ ಗಣತಿ ವರದಿ ಅವೈಜ್ಞಾನಿಕವಾಗಿದ್ದು, ಇದನ್ನು ತಿರಸ್ಕರಿಸಿ, ಮತ್ತೊಮ್ಮೆ ನಿಖರವಾಗಿ ಮತ್ತು ಪಾರದರ್ಶಕವಾಗಿ ಜಾತಿ ಗಣತಿ ಮಾಡಬೇಕು ಎಂದು ಒತ್ತಾಯಿಸುತ್ತಿರುವುದು ಸಮಂಜಸವಾಗಿದೆ.
ಇಷ್ಟೆಲ್ಲಾ ವಿರೋಧದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವರದಿಯನ್ನು ಅನುಷ್ಠಾನಕ್ಕೆ ತರಲು ಮುಂದಾಗಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿ ಮತ್ತೊಮ್ಮೆ ನಿಖರವಾಗಿ ಮತ್ತು ಪಾರ ದರ್ಶಕವಾಗಿ ಜಾತಿ ಜನಗಣತಿ ನಡೆಸಬೇಕು, ಮತ್ತು ಎಲ್ಲ ವರ್ಗಗಳಿಗೂ ನ್ಯಾಯ ಸಿಗಬೇಕು. – ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…