ಓದುಗರ ಪತ್ರ

ಓದುಗರ ಪತ್ರ | ಜನಗಣತಿ ದೇಶದ ಏಳಿಗೆಯ ದಿಕ್ಸೂಚಿ

ಜನಗಣತಿ ಕಾರ್ಯದಲ್ಲಿ ಗಣತಿದಾರರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಮನೆಗೂ ಭೇಟಿ ನೀಡಬೇಕು. ಗುರುತಿನ ಚೀಟಿ ಧರಿಸಿ, ಸೌಜನ್ಯದಿಂದ ಮಾಹಿತಿ ಸಂಗ್ರಹಿಸಿ. ಮನೆ ಬಾಗಿಲು ಮುಚ್ಚಿದ್ದರೆ ಮರು ಭೇಟಿ ನೀಡಿ ಮಾಹಿತಿ ಪಡೆಯುವುದು ನಿಮ್ಮ ಬದ್ಧತೆಯಾಗಿರಲಿ. ಊಹೆಗಳಿಗೆ ಅವಕಾಶ ನೀಡದೆ ವಾಸ್ತವವನ್ನೇ ಆಪ್‌ನಲ್ಲಿ ದಾಖಲಿಸಿ ಹಾಗೂ ಜನರ ಖಾಸಗಿ ಮಾಹಿತಿಯ ಗೌಪ್ಯತೆ ಕಾಪಾಡಿ.

ಆನ್‌ಲೈನ್‌ನಲ್ಲಿ ಮಾಹಿತಿ ನೀಡಿದವರಿಂದ ರೆಫರೆನ್ಸ್ ಸಂಖ್ಯೆ ಪಡೆದು ಕೆಲಸ ಸುಲಭವಾಗಿಸಿಕೊಳ್ಳಿ. ನಾಗರಿಕರು ನಿಖರ ಮಾಹಿತಿ ನೀಡಿ ಈ ರಾಷ್ಟ್ರೀಯ ಅಭಿಯಾನವನ್ನು ಯಶಸ್ವಿ ಗೊಳಿಸುವುದು ಅಗತ್ಯವಾಗಿದೆ. ಸಾರ್ವಜನಿಕರು ಏಪ್ರಿಲ್ ೧೫ರ ವರೆಗೆ ಸ್ವಯಂ ಗಣತಿ ಮಾಡಿಕೊಳ್ಳಲು ಅವಕಾಶವಿದ್ದು, ಇದರ ಸದುಪಯೋಗಪಡಿಸಿಕೊಳ್ಳಬೇಕು. ತದನಂತರ ಏಪ್ರಿಲ್ ೧೬ರಿಂದ ಒಂದು ತಿಂಗಳ ಕಾಲ ಮೊದಲ ಹಂತವಾಗಿ ಮನೆಪಟ್ಟಿ ಹಾಗೂ ಮನೆಗಣತಿ ಕಾರ್ಯ ನಡೆಯಲಿದ್ದು, ಪ್ರತಿಯೊಬ್ಬರೂ ಗಣತಿದಾರರಿಗೆ ಸಹಕರಿಸಬೇಕು. ಈ ಬಗ್ಗೆ ಕಾಲರ್ ಟ್ಯೂನ್ ಹಾಗೂ ಸ್ವಚ್ಛತಾ ವಾಹನಗಳ ಮೂಲಕ ಜಾಗೃತಿ ಮೂಡಿಸುವುದು ಅಭಿಯಾನಕ್ಕೆ ಸಹಕಾರಿಯಾಗಿದೆ. ಮುಖ್ಯವಾಗಿ, ಗಣತಿಯಿಂದ ಸರ್ಕಾರಿ ಸೌಲಭ್ಯಗಳು ಅಥವಾ ರೇಷನ್ ಕಾರ್ಡ್ ರದ್ದಾಗುತ್ತದೆ ಎಂಬ ತಪ್ಪು ತಿಳಿವಳಿಕೆ ಬೇಡ. ನಿಮ್ಮ ಮಾಹಿತಿಯು ದೇಶದ ಭವಿಷ್ಯದಯೋಜನೆಗಳಿಗೆ ಮಾತ್ರ ಬಳಕೆಯಾಗಲಿದ್ದು, ಎಲ್ಲರೂ ಈ ಮಹತ್ಕಾರ್ಯದಲ್ಲಿ ಪಾಲ್ಗೊಳ್ಳೋಣ. –ಬಿ. ಗಣೇಶ, ಕೆ. ಜಿ. ಕೊಪ್ಪಲು,

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

3 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

3 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

3 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

3 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago